ಬೀದರ್ ವೈದ್ಯರಿಂದ ಹೈದರಾಬಾದ್‍ನಲ್ಲಿ ಉಚಿತ ಮಾಸ್ಕ್ ವಿತರಣೆ

Public TV
1 Min Read

ಬೀದರ್: ತೆಲಂಗಾಣದ ಹೈದರಾಬಾದ್ ನಗರದ ಚಾರ್‍ಮೀನಾರ ಬಳಿ ಉಚಿತವಾಗಿ ಜನರಿಗೆ ಮಾಸ್ಕ್ ವಿತರಣೆ ಮಾಡುವ ಮೂಲಕ ಕೊರೊನಾ ಸೋಂಕು ಕುರಿತು ಬೀದರ್‍ನ ವೈದ್ಯರು ಜನರಲ್ಲಿ ಜಾಗೃತಿ ಮೂಡಿಸಿದ್ದಾರೆ.

ಬೀದರ್ ಜಿಲ್ಲೆಯ ಭಾಲ್ಕಿ ತಾಲೂಕಿನ ಕುಂಟೆಸಿರ್ಸಿ ಗ್ರಾಮದ ನಿವಾಸಿಯಾಗಿರುವ ದಂತ ವೈದ್ಯ ಡಾ. ಪ್ರಭು ಜನರಿಗೆ ಉಚಿತವಾಗಿ ಮಾಸ್ಕ್ ವಿತರಿಸಿದ್ದಾರೆ. ಜೊತೆಗೆ ಕೊರೊನಾ ಸೊಂಕು ಬಗ್ಗೆ ಜನರಲ್ಲಿ ಮುಂಜಾಗ್ರತಾ ಕ್ರಮಗಳ ಕುರಿತು ಜನರಿಗೆ ಜಾಗೃತಿ ಮೂಡಿಸಿ ಸಾಮಾಜಿಕ ಕಳಕಳಿ ಮೆರೆದ್ದಾರೆ.

ಮನೆ ಹೊರಗಡೆ ಬರುವಾಗ ಕಡ್ಡಾಯವಾಗಿ ಮಾಸ್ಕ್ ಧರಿಸಿಕೊಂಡೆ ಬರಬೇಕು. ಸ್ವಚ್ಛತೆಯಿಂದ ಇರಬೇಕೆಂದು ವೈದ್ಯರಾದ ಪ್ರಭು ಸಾರ್ವಜನಿಕರಲ್ಲಿ ಮನವಿ ಮಾಡಿಕೊಂಡಿದ್ದಾರೆ. ಈ ಡೆಡ್ಲಿ ಮಹಾಮಾರಿ ಕೊರೊನಾ ವೈರಸ್ ಬಗ್ಗೆ ಸಂಘ ಸಂಸ್ಥೆಗಳು ಜನಜಾಗೃತಿ ಕಾರ್ಯಕ್ಕೆ ಕೈ ಜೋಡಿಸಬೇಕೆಂದು ವೈದ್ಯರು ಕೇಳಿಕೊಂಡಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *