ಶಿವನ ದರ್ಶನ ಮುಗಿಸಿ ಬರುತ್ತಿದ್ದ ವೇಳೆ ಭೀಕರ ಅಪಘಾತ – ಮಹಾರಾಷ್ಟ್ರ ಮೂಲದ ನಾಲ್ವರು ಸಾವು

By
1 Min Read

ಬೀದರ್‌: ದೇವರ ದರ್ಶನ ಪಡೆದು ವಾಪಸಾಗುತ್ತಿದ್ದಾಗ ಆಟೋಗೆ ಲಾರಿ ಡಿಕ್ಕಿಯಾಗಿ ಮಹಾರಾಷ್ಟ್ರ (Maharashtra) ಮೂಲದ ನಾಲ್ವರು ಸಾವನ್ನಪ್ಪಿರುವ ಘಟನೆ ಬೀದರ್ (Bidar) ಜಿಲ್ಲೆಯ ಬಸವಕಲ್ಯಾಣ ತಾಲೂಕಿನಲ್ಲಿ ಮನ್ನಳ್ಳಿ ಬಳಿಯ ರಾಷ್ಟ್ರೀಯ ಹೆದ್ದಾರಿ-65 (National Highway-65) ರಲ್ಲಿ ನಡೆದಿದೆ.

ಪ್ರಮಿಳಾ (32), ಆಟೋ ಚಾಲಕ ಸುನೀಲ್ ಜಗದಾಳೆ (35), ಅನುಷಾ ಬಾಯಿ (65) ಹಾಗೂ ಪೂಜಾ ಜಾದವ್ (40) ಮೃತ ದುರ್ದೈವಿಗಳು. 8 ಜನ ಪ್ರಯಾಣಿಸುತ್ತಿದ್ದ ಆಟೋದಲ್ಲಿ 4 ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಉಳಿದ ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದು, ಚಿಕಿತ್ಸೆಗಾಗಿ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಇದನ್ನೂ ಓದಿ: 15 ದಿನಗಳ ನಿತ್ಯ 5 ಸಾವಿರ ಕ್ಯೂಸೆಕ್‌ ನೀರು ತಮಿಳುನಾಡಿಗೆ ಹರಿಸಿ – ಕರ್ನಾಟಕಕ್ಕೆ CWRC ಆದೇಶ

ಶ್ರಾವಣ ಸೋಮವಾರ ಹಿನ್ನೆಲೆಯಲ್ಲಿ ಮಹಾರಾಷ್ಟ್ರ ಮೂಲದ 8 ಜನ ಬಸವಕಲ್ಯಾಣ ತಾಲೂಕಿನ ಚಂಡಕಾಪೂರ್ ಗ್ರಾಮದ ಬಳಿಯ ಐತಿಹಾಸಿಕ ಅಮೃತ ಕುಂಡ ಶಿವನ ದೇವಸ್ಥಾನಕ್ಕೆ ಭೇಟಿ ನೀಡಿದ್ದರು. ದೇವರ ದರ್ಶನ ಮುಗಿಸಿ ವಾಪಸಾಗುತ್ತಿದ್ದ ವೇಳೆ ದುರ್ಘಟನೆ ಸಂಭವಿಸಿದೆ. ಈ ಕುರಿತು ಬಸವಕಲ್ಯಾಣ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ದೇಶದ ಸಾಫ್ಟ್‌ವೇರ್‌ ರಫ್ತಿನಲ್ಲಿ 40% ಕರ್ನಾಟಕದ್ದು, ನಾವೇ ನಂಬರ್‌ 1: ಪ್ರಿಯಾಂಕ್‌ ಖರ್ಗೆ

Web Stories

Share This Article
ಮಳೆಗಾಲದಲ್ಲಿ ಪಡ್ಡೆಗಳ ಮೈಚಳಿ ಬಿಡಿಸಿದ ತಮನ್ನಾ ಹಾಟ್‌ ಲುಕ್‌ ಯೋಗ ದಿನದಂದು ನಟಿ ಪ್ರಣಿತಾ ಯೋಗ… ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!.. ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್ ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್ ನವಿಲಿನಂತೆ ಕಂಗೊಳಿಸಿದ ಮಲೈಕಾ ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್ ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್ ಡೆನಿಮ್ ಡ್ರೆಸ್‌ನಲ್ಲಿ ದೀಪಿಕಾ ಫೋಟೋಶೂಟ್