ಬೀದರ್‌ನಲ್ಲಿ ಯುವ ಉದ್ಯಮಿ ಕಿಡ್ನಾಪ್

Public TV
1 Min Read

ಬೀದರ್: ನಗರದ ಯುವ ಉದ್ಯಮಿಯೊಬ್ಬರನ್ನು ದುಷ್ಕರ್ಮಿಗಳು ಅಪಹರಣ ಮಾಡಿದ ಘಟನೆ ಬುಧವಾರ ರಾತ್ರಿ ನಡೆದಿದ್ದು, ಪತ್ತೆಗಾಗಿ ಪೊಲೀಸರು ಕಾರ್ಯಾಚರಣೆ ನಡೆಸಿದ್ದಾರೆ.

ನಗರದ ನಿವಾಸಿ ಅಭಿಷೇಕ್ ಇನಾನಿ ಅಪಹರಣವಾದ ಯುವ ಉದ್ಯಮಿ. ಅಭಿಷೇಕ್ ಅವರು ಬುಧವಾರ ಸಂಜೆ ಕಂಪನಿ ಕೆಲಸ ಮುಗಿಸಿ ಸ್ಕೂಟಿಯಲ್ಲಿ ಬರುತ್ತಿದ್ದರು. ಈ ವೇಳೆ ಕೋಳಾರದ ಕೈಗಾರಿಕಾ ಪ್ರದೇಶದಲ್ಲಿರುವ ಆಂಜನೇಯ ದೇವಸ್ಥಾನ ಸಮೀಪದ ನಿರ್ಜನ ಪ್ರದೇಶದಲ್ಲಿ ಅಪಹರಣ ಮಾಡಿದ್ದಾರೆ.

ಅಭಿಷೇಕ್ ಅವರು ಕೋಳಾರ ಇಂಡಸ್ಟ್ರಿಯಲ್ ಪ್ರದೇಶದಲ್ಲಿ ದಾಲ್ ಮಿಲ್ ಫ್ಯಾಕ್ಟರಿ ನಡೆಸುತ್ತಿದ್ದರು. ಅಪಹರಣಕ್ಕೂ ಎರಡು ದಿನ ಮುಂಚೆ ಅಭಿಷೇಕ್ ಅವರಿಗೆ ದುಷ್ಕರ್ಮಿಗಳು ಕರೆ ಮಾಡಿ, ಹಣಕ್ಕೆ ಬೇಡಿಕೆ ಇಟ್ಟಿದ್ದರು. ಈ ಕುರಿತು ಅಭಿಷೇಕ್ ಅವರು ಬೀದರ್ ಜಿಲ್ಲಾ ವರಿಷ್ಠಾಧಿಕಾರಿ ಟಿ.ಶ್ರೀಧರ್ ಅವರಿಗೆ ದೂರು ನೀಡಿದ್ದರು ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ದುಷ್ಕರ್ಮಿಗಳು ಹಣದಾಸೆಗೆ ಅಭಿಷೇಕ್ ಅವರನ್ನು ಅಪಹರಿಸಿದ್ದಾರೆ ಎಂದು ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ. ಹೀಗಾಗಿ ಬುಧವಾರ ರಾತ್ರಿಯಿಂದಲೇ ಶೋಧ ಕಾರ್ಯಾಚರಣೆ ಚುರುಕುಗೊಳಿಸಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *