ಉಪಚುನಾವಣೆ ಹೊತ್ತಲ್ಲೇ ಕಾಂಗ್ರೆಸ್‍ಗೆ ಶಾಕ್..!

Public TV
1 Min Read

ಬೆಂಗಳೂರು: ಉಪಚುನಾವಣೆ ಹೊತ್ತಲ್ಲಿಯೇ ಮಾಜಿ ಪ್ರಧಾನಿ ಎಚ್‍ಡಿ ದೇವೇಗೌಡ ಐದು ದಿನಗಳ ಕಾಲ ಲಂಡನ್ ಪ್ರವಾಸ ಕೈಗೊಂಡಿದ್ದಾರೆ. ಮೂರು ತಿಂಗಳ ಹಿಂದೆಯೇ ನಿಗದಿಯಾದ ಎನ್‍ಆರ್‍ಐ ವೆಲ್ ಫೇರ್ ಸೊಸೈಟಿ ಆಫ್ ಇಂಡಿಯಾದ ಕಾರ್ಯಕ್ರಮ ಇದಾಗಿದೆ.

ಲಂಡನ್‍ನ ಪಾರ್ಲಿಮೆಂಟ್ ಹೌಸ್‍ನಲ್ಲಿ ಹೆಚ್.ಡಿ.ದೇವೇಗೌಡ ಭಾಷಣ ಮಾಡಲಿದ್ದಾರೆ. ನಂತರ ಅಕ್ಟೋಬರ್ 28ಕ್ಕೆ ವಾಪಸ್ ಆಗಲಿದ್ದಾರೆ. ಎಚ್‍ಡಿ.ದೇವೇಗೌಡರ ಈ ಲಂಡನ್ ಪ್ರವಾಸ ಉಪಚುನಾವಣೆ ಮೇಲೂ ಪ್ರಭಾವ ಬೀರಲಿದೆ ಎನ್ನಲಾಗ್ತಿದೆ.

ಇತ್ತ ಸಿಎಂ ಕುಮಾರಸ್ವಾಮಿ ಇವತ್ತು ಧರ್ಮಸ್ಥಕ್ಕೆ ಭೇಟಿ ನೀಡಿ, ಮಂಜುನಾಥನಿಗೆ ಪೂಜೆ ಸಲ್ಲಿಸಲಿದ್ದಾರೆ. ಕುಮಾರಸ್ವಾಮಿ ಇಂದು ಒಟ್ಟು 23.5 ಕೋಟಿ ವೆಚ್ಚದ ಯೋಜನೆಗಳಿಗೆ ಚಾಲನೆ ನೀಡಲಿದ್ದಾರೆ. ಶ್ರೀ ಕ್ಷೇತ್ರ ಧರ್ಮಸ್ಥಳದ ಮಂಜೂಷಾ ವಸ್ತು ಸಂಗ್ರಹಾಲಯದ ನವೀಕೃತ ಕಟ್ಟಡದ ಉದ್ಘಾಟನೆ ನಡೆಸಲಿದ್ದಾರೆ. 1 ಲಕ್ಷದ 4 ಸಾವಿರದ ಚದರಡಿ ವಿಸ್ತೀರ್ಣ ಹೊಂದಿರುವ ಈ ಮ್ಯೂಸಿಯಂ ಹೈದ್ರಾಬಾದ್ ಸಾಲಾರ್‍ಜಂಗ್ ಮ್ಯೂಸಿಯಂ ಮಾದರಿಯಲ್ಲಿದೆ.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

Share This Article
Leave a Comment

Leave a Reply

Your email address will not be published. Required fields are marked *