ಹೊಸ ವರ್ಷದ ಮೊದಲ ದಿನ ತಪ್ಪಿದ ಭಾರಿ ಅನಾಹುತ

Public TV
1 Min Read

ಬೆಂಗಳೂರು: ಹೊಸ ವರ್ಷದ ಮೊದಲ ದಿನ ದೇವಾಲಯಕ್ಕೆ ಬಂದ ಭಕ್ತರ ಮೇಲೆ ಕಾರು ಹರಿದು ಭಾರೀ ಅನಾಹುತವೊಂದು ತಪ್ಪಿದ ಘಟನೆ ಆನೇಕಲ್ ತಾಲೂಕಿನ ಅತ್ತಿಬೆಲೆಯ ಪಟಾಲಮ್ಮ ದೇವಾಲಯದ ಬಳಿ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.

ಹೊಸ ವರ್ಷ ಮೊದಲ ದಿನ ಎಂದು ದೇವಸ್ಥಾನದ ಮುಂದೆ ಭಕ್ತರು ನೆರೆದಿದ್ದರು. ಈ ವೇಳೆ ಕಾರು ದೇವಸ್ಥಾನದ ಮುಂದೆ ನಿಂತಿದ್ದ ಓರ್ವ ಮಹಿಳೆ, ಇಬ್ಬರು ಮಕ್ಕಳು ಸೇರಿ ನಾಲ್ವರಿಗೆ ಡಿಕ್ಕಿ ಹೊಡೆದಿದೆ. ಪರಿಣಾಮ ಓರ್ವ ಮಹಿಳೆ ಹಾಗೂ ಮಗುವಿಗೆ ಗಂಭೀರ ಗಾಯವಾಗಿದೆ. ಮಕ್ಕಳ ಕೈ ಮುರಿತವಾಗಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಅಪಘಾತದಲ್ಲಿ ಗಾಯಗೊಂಡ ಗಾಯಾಳುಗಳನ್ನು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಕಾರು ಚಾಲಕ ಬಾಲು ಎಂಬವನಿಗೆ ಸಾರ್ವಜನಿಕರು ಥಳಿಸಿದ್ದಾರೆ. ಕುಡಿದ ಮತ್ತಿನಲ್ಲಿ ಚಾಲಕ ಬಾಲು ಕಾರು ಚಾಲನೆ ಮಾಡಿದ್ದರಿಂದ ಈ ಘಟನೆ ನಡೆದಿದೆ.

ಈ ಅಪಘಾತದ ದೃಶ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಅತ್ತಿಬೆಲೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

Share This Article
Leave a Comment

Leave a Reply

Your email address will not be published. Required fields are marked *