Bigg Boss Kannada 11: ಸ್ವರ್ಗ, ನರಕದ ಪಾಠ ಮಾಡಿದ ಸುದೀಪ್

Public TV
2 Min Read

ಕಿರುತೆರೆಯ ಅತೀ ದೊಡ್ಡ ರಿಯಾಲಿಟಿ ಬಿಗ್ ಬಾಸ್ (Bigg Boss) ಕಾರ್ಯಕ್ರಮಕ್ಕೆ ಕೌಂಟ್ ಡೌನ್ ಶುರುವಾಗಿದೆ. ಇನ್ನೇನು ಕೆಲವೇ ದಿನಗಳಲ್ಲಿ ಸ್ಪರ್ಧಿಗಳನ್ನು ಪರಿಚಯಿಸುವುದರ ಜೊತೆಗೆ ಕಿಚ್ಚ ದೊಡ್ಮನೆ ವೇದಿಕೆಗೆ ಎಂಟ್ರಿ ಕೊಡಲಿದ್ದಾರೆ. ಮೊದಲ ಪ್ರೋಮೋದಂತೆ 2ನೇ ಪ್ರೋಮೋ ಕೂಡ ಸಖತ್ ಖಡಕ್ ಆಗಿ‌ ಮೂಡಿ ಬಂದಿದೆ.‌ ಇದರಲ್ಲಿ ಸುದೀಪ್ (Sudeep) ಸ್ವರ್ಗ ಮತ್ತು ನರಕದ ಪಾಠವನ್ನು ಮಾಡಿದ್ದಾರೆ.

ಪ್ರೋಮೋ ಆರಂಭದಲ್ಲಿಯೇ ಕೆಲವು ಯುವಕ-ಯುವತಿಯರು ಸ್ವರ್ಗದಲ್ಲಿ ಡೈನಿಂಗ್ ಟೇಬಲ್ ಮೇಲೆ ಕುಳಿತು ಖುಷಿಯಿಂದ ಆಹಾರ ಸೇವಿಸುತ್ತಿದ್ದಾರೆ. ಆಗ ಎಂಟ್ರಿ ಕೊಡುವ ಕಿಚ್ಚ ಸುದೀಪ್, ಸ್ವರ್ಗದಲ್ಲಿರುವವರು, ನರಕದಲ್ಲಿರುತ್ತಾರೆ ನರಕದಲ್ಲಿರುವವರು ಸ್ವರ್ಗದಲ್ಲಿರುತ್ತಾರೆ ಎಂದು ತಮ್ಮದೇ ಶೈಲಿಯಲ್ಲಿ ಸ್ವರ್ಗ (Heaven) ಮತ್ತು ನರಕದ (Hell) ಜೀವನದ ಬಗ್ಗೆ ಮಾತನಾಡಿದ್ದಾರೆ.  ಇದನ್ನೂ ಓದಿ: ಜಾಮೀನು ಅರ್ಜಿ ಸಲ್ಲಿಸಿದ ದರ್ಶನ್ ಪರ ವಕೀಲರು: ಸೋಮವಾರಕ್ಕೆ ವಿಚಾರಣೆ

ಯಾರು ಸ್ನೇಹಿತರಾಗುತ್ತಾರೆ ಎಂದು ನಂಬಿರುತ್ತೇವೆಯೋ ಅವರೇ ಬೆನ್ನಿಗೆ ಚೂರಿ ಹಾಕಬಹುದು, ಯಾರು ಚೂರಿ ಹಾಕುತ್ತಾರೆ ಎಂದುಕೊಂಡಿರುತ್ತೇವೆಯೋ ಅವರೇ ಸ್ನೇಹಿತರೂ ಆಗಬಹುದು ಎಂದು ಹೇಳಿದ್ದಾರೆ. ಆ ಮೂಲಕ ಬಿಗ್​ ಬಾಸ್ ಮನೆಯಲ್ಲಿ ಯಾವ ಸಂಬಂಧವೂ ಶಾಶ್ವತವಲ್ಲ ಎಂದು ಸಹ ಪ್ರೋಮೋ ಮೂಲಕ ಪಾಠ ಮಾಡಿದ್ದಾರೆ. ಈ ಮೂಲಕ ಈ ಸಲ ದೊಡ್ಮನೆ ಆಟ ಸುಲಭವಂತೂ ಆಗಿರುವುದಿಲ್ಲ, ಹಲವು ಟ್ವಿಸ್ಟ್ ಮತ್ತು ಟರ್ನ್​ಗಳನ್ನು ಒಳಗೊಂಡಿರುತ್ತದೆ ಎಂದು ಸುಳಿವು ನೀಡಿದ್ದಾರೆ.


ಈ ಹೊಸ ಪ್ರೋಮೋದಲ್ಲಿ ಬಿಗ್ ಬಾಸ್ ಕಾರ್ಯಕ್ರಮದ ಸಮಯದ ಬಗ್ಗೆ ತಿಳಿಸಿದ್ದಾರೆ. ಸೆ.29ರಂದು ಸಂಜೆ 6ಕ್ಕೆ ಗ್ರ್ಯಾಂಡ್ ಆಗಿ ಲಾಂಚ್ ಆಗುತ್ತಿದ್ದು, ಪ್ರತಿದಿನ ರಾತ್ರಿ 9.30ಕ್ಕೆ ಶೋ ಪ್ರಸಾರವಾಗಲಿದೆ ಎಂದು ವಾಹಿನಿ ತಿಳಿಸಿದೆ. ಕಿಚ್ಚನ ನಯಾ ಖದರ್ ನೋಡೋಕೆ ಫ್ಯಾನ್ಸ್ ಕೂಡ ಕಾಯ್ತಿದ್ದಾರೆ. ಇದನ್ನೂ ಓದಿ: ಮತ್ತೆ ಕ್ಯಾಂಪಸ್‌ ನೇಮಕಾತಿ ಆರಂಭಿಸಿದ ಭಾರತೀಯ ಐಟಿ ಕಂಪನಿಗಳು

ಅಂದಹಾಗೆ ಬಿಗ್ ಬಾಸ್ ಬರಲಿರುವ ಕೆಲ ಸ್ಪರ್ಧಿಗಳ ಹೆಸರು ಸದ್ದು ಮಾಡುತ್ತಿದೆ. ಮೋಕ್ಷಿತಾ ಪೈ, ಹುಲಿ ಕಾರ್ತಿಕ್, ಸುಕೃತಾ ನಾಗ್, ಕಿರುತೆರೆ ನಟಿ ಅಮೂಲ್ಯ, ಭವ್ಯಾ ಗೌಡ, ವರ್ಷಾ ಕಾವೇರಿ ಸೇರಿದಂತೆ ಅನೇಕರು ಹೆಸರು ಚಾಲ್ತಿಯಲ್ಲಿದೆ. ಯಾರೆಲ್ಲಾ ದೊಡ್ಮನೆ ಬರುತ್ತಾರೆ ಎಂಬುದನ್ನು ಕಾದುನೋಡಬೇಕಿದೆ.

Share This Article