ದರ್ಶನ್ ಫ್ಯಾನ್ಸ್ ಕಿರಿಕ್ ಬಗ್ಗೆ ಠಾಣೆ ಮೆಟ್ಟಿಲೇರಿದ ‘ಬಿಗ್ ಬಾಸ್’ ಪ್ರಥಮ್

Public TV
1 Min Read

‘ಬಿಗ್ ಬಾಸ್’ (Bigg Boss Kannada 4) ಖ್ಯಾತಿಯ ಪ್ರಥಮ್‌ಗೆ (Pratham) ನಿನ್ನೆ (ನ.16) ದರ್ಶನ್ ಫ್ಯಾನ್ಸ್ ಹೋಟೆಲ್‌ವೊಂದರಲ್ಲಿ ನಿಂದಿಸಿದ್ದರ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದರು. ಈ ಬೆನ್ನಲ್ಲೇ ಮಾಗಡಿ ರಸ್ತೆಯ ಡಿಸಿಪಿ ಕಚೇರಿಗೆ ಭೇಟಿ ನೀಡಿ ಡಿಸಿಪಿ ಗಿರೀಶ್ ಅವರಿಗೆ ನೇರವಾಗಿ ದರ್ಶನ್ ಫ್ಯಾನ್ಸ್ (Darshan Fans) ವಿರುದ್ಧ ದೂರು ನೀಡಿದ್ದಾರೆ. ಇದನ್ನೂ ಓದಿ:‘ಮಹಾವತಾರ ನರಸಿಂಹ’ ಚಿತ್ರದ ಮೋಷನ್ ಪೋಸ್ಟರ್ ರಿವೀಲ್ ಮಾಡಿದ ಹೊಂಬಾಳೆ ಫಿಲ್ಮ್ಸ್‌

ಡಿಸಿಪಿ ಕಚೇರಿಗೆ ಭೇಟಿ ನೀಡಿದ್ದ ವೇಳೆ, ಪ್ರಥಮ್ ಪ್ರತಿಕ್ರಿಯಿಸಿ, ಗೂಂಡಾಗಳ ವಿರುದ್ಧ ದೂರು ದಾಖಲಿಸಿದ್ದೇನೆ. ನಿನ್ನೆ ಹೊಟೇಲ್‌ವೊಂದರಲ್ಲಿ ದರ್ಶನ್ ಅವರ ಕೆಲ ಅಭಿಮಾನಿಗಳ ಅತಿರೇಕ ವರ್ತನೆ ತೋರಿದರು. ಈ ಹಿನ್ನೆಲೆ, ಡಿಸಿಪಿ ಗಿರೀಶ್ ಅವರು ಕ್ರಮ ತಗೆದುಕೊಳ್ಳುವುದಾಗಿ ತಿಳಿಸಿದರು. ಇನ್ನು ಕೆಲವೇ ಹೊತ್ತಲ್ಲಿ ತಪ್ಪು ಮಾಡಿದವರು ಒಳಗೆ ಹೋಗುತ್ತಾರೆ. ಅವರಿಗೆ ತಕ್ಕ ಶಿಕ್ಷೆ ಆಗುತ್ತದೆ ಎಂದಿದ್ದಾರೆ.

ಅಷ್ಟಕ್ಕೂ ಆಗಿದ್ದೇನು?

ನಿನ್ನೆ ಹೋಟೆಲ್‌ವೊಂದಕ್ಕೆ ಪ್ರಥಮ್ ತೆರಳಿದ ಸಂದರ್ಭದಲ್ಲಿ ಏಕಾಎಕಿ ಬಂದು ಜೈ ಡಿಬಾಸ್ ಅಂತ ಕೂಗಿ ಅಂತ ಫ್ಯಾನ್ಸ್ ಗಲಾಟೆ ಮಾಡಿದರು. ಅಶ್ಲೀಲ ಪದ ಬಳಸಿ ಕೈಮಿಲಾಯಿಸೋಕೆ ಫ್ಯಾನ್ಸ್ ಯತ್ನಿಸಿದರು. ಆ ನಂತರ ಹೋಟೆಲ್‌ನ 8 ಜನ ಬೌನ್ಸರ್ ಆ ಗೂಂಡಾಗಳನ್ನು ಹೊರಗೆ ತಳ್ಳಿದ್ದರು ಎಂದು ಘಟನೆಯ ಬಗ್ಗೆ ಪ್ರಥಮ್ ವಿವರಿಸಿದ್ದರು.

ಆ ನಂತರ ಹೋಟೆಲ್ ಸಿಬ್ಬಂದಿ ಮತ್ತು ಮ್ಯಾನೇಜರ್ ಮನವಿಯ ಮೇರೆಗೆ ನಾನು ದೂರು ಕೊಡಬಾರದು ಎಂದು ನಿರ್ಧರಿಸಿದೆ. ನಮ್ಮ ಪಾಡಿಗೆ ನಾವಿದ್ದೇವೆ. ನಿಮ್ಮ ಪಾಡಿಗೆ ನೀವಿರಿ. ದರ್ಶನ್ ಸರ್ ಅವರ ಪಾಡಿಗೆ ಇದ್ದಾರೆ. ಈ ಮಿನಿ ಗೂಂಡಾಗಳ ನಿಗರಾಟ ನೋಡೋಕೆ ಆಗುತ್ತಿಲ್ಲ. ಈ ಘಟನೆ ಎಲ್ಲವೂ ಸಿಸಿಟಿವಿಯಲ್ಲಿ ರೆಕಾರ್ಡ್ ಆಗಿದೆ ಎಂದು ಎಕ್ಸ್‌ನಲ್ಲಿ ನಟ ತಿಳಿಸಿದ್ದರು.

Share This Article