ಕಾಂಗ್ರೆಸ್ ಅಧಃಪತನಕ್ಕೆ ಕಾರಣ ಯಾರು ಎನ್ನೋದು ಜನರಿಗೆ ತಿಳಿದಿದೆ: ನಿತೀಶ್ ಕುಮಾರ್

Public TV
1 Min Read

ಪಾಟ್ನಾ: ಕಾಂಗ್ರೆಸ್ ಅಧಃಪತನಕ್ಕೆ ಯಾರು ಕಾರಣವೆಂದು ಜನರಿಗೆ ತಿಳಿದಿದೆ ಎಂದು ರಾಹುಲ್‍ಗಾಂಧಿಗೆ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಟಾಂಗ್ ನೀಡಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಹುಲ್ ಗಾಂಧಿ ಅವರ ಪಕ್ಷದ ಬಗ್ಗೆ ಏನು ಯೋಚಿಸುತ್ತಾರೆಂದು ನಾನು ಹೇಗೆ ಹೇಳಲಿ, ಅದು ಅವರ ಪಕ್ಷದ ಆಂತರಿಕ ವಿಚಾರವಾಗಿದೆ. ಅವರು ಪಕ್ಷವನ್ನು ನಡೆಸುತ್ತಿದ್ದರು. ಜೊತೆಗೆ ಕಾಂಗ್ರೆಸ್‍ನ ಅಂತಿಮ ಅವನತಿಗೆ ಕಾರಣ ಯಾರು ಎಂಬುದು ಜನರಿಗೆ ತಿಳಿದಿದೆ ಎಂದು ತಿರಗೇಟು ನೀಡಿದರು.

ರಾಹುಲ್ ಗಾಂಧಿ ಅವರು ಅವರ ಬಗ್ಗೆ ಏನು ಹೇಳುತ್ತಿದ್ದಾರೆ ಎನ್ನುವುದರ ಬಗ್ಗೆ ಪ್ರತಿಕ್ರಿಯೆ ನೀಡಲು ಏನೂ ಇಲ್ಲ ಎಂದರು. ಇದನ್ನೂ ಓದಿ: ಸರ್ಕಾರಿ ಕಸ್ಟಡಿಯಿಂದ ಮೂವರು ಬಾಂಗ್ಲಾದೇಶದ ಮಹಿಳೆಯರು ಎಸ್ಕೇಪ್

ಇದೇ ವೇಳೆ ಹೆಚ್ಚುತ್ತಿರುವ ಇಂಧನ ಬೆಲೆಗಳ ಬಗ್ಗೆ ಪ್ರತಿಕ್ರಿಯಿಸಿ ರಾಜ್ಯದ ಸಂಪನ್ಮೂಲಗಳು ಬಹಳ ಸೀಮಿತವಾಗಿವೆ ಎಂದ ಅವರು ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ತೆರಿಗೆಯನ್ನು ಕಡಿಮೆ ಮಾಡುವಲ್ಲಿ ತಮ್ಮ ಅಸಹಾಯಕತೆಯ ಬಗ್ಗೆ ತಿಳಿಸಿದರು. ಇದನ್ನೂ ಓದಿ: ಠಾಣೆಯಲ್ಲೇ ಕರ್ತವ್ಯನಿರತ ಹೆಡ್‌ ಕಾನ್ಸ್‌ಟೇಬಲ್‌ ಸಾವು

ಈ ಹಿಂದೆ ಕಾರ್ಯಕ್ರಮವೊಂದರಲ್ಲಿ ರಾಹುಲ್ ಗಾಂಧಿ ಮಾತನಾಡಿ, ಅಧಿಕಾರದ ಕೇಂದ್ರದಲ್ಲಿ ಹುಟ್ಟಿದ್ದರೂ ಅಧಿಕಾರದ ದುರಾಸೆಯಿಲ್ಲ. ನನಗೆ ಅದರಲ್ಲಿ ಆಸಕ್ತಿಯೂ ಇಲ್ಲ. ಬದಲಿಗೆ ನಾನು ದೇಶವನ್ನು ಅರ್ಥ ಮಾಡಿಕೊಳ್ಳಲು ಪ್ರಯತ್ನಿಸುತ್ತೇನೆ. ಅಧಿಕಾರದ ಅನ್ವೇಷಣೆಯಲ್ಲಿ ಕೆಲವು ರಾಜಕಾರಣಿಗಳು ಇದ್ದಾರೆ. ಅವರು ಅಧಿಕಾರವನ್ನು ಹಿಡಿಯಲು ಬಗ್ಗೆ ಯೋಚಿಸುತ್ತಾರೆ ಎಂದು ಹೇಳಿದ್ದರು.

Share This Article
Leave a Comment

Leave a Reply

Your email address will not be published. Required fields are marked *