ಬೈಕ್‌ ಅಪಘಾತ – ರಸ್ತೆಗೆ ಬಿದ್ದ ಯುವತಿ ಮೇಲೆ ಹರಿದ ಬಸ್‌; 15 ದಿನದಲ್ಲಿ ಹಸೆಮಣೆ ಏರಬೇಕಾಗಿದ್ದವಳ ದುರಂತ ಅಂತ್ಯ

Public TV
1 Min Read

ಶಿವಮೊಗ್ಗ: ನಗರದ (Shivamogga) ಮಲವಗೊಪ್ಪದ ಬಳಿ ಸಂಭವಿಸಿದ ಬೈಕ್ ಅಪಘಾತದಲ್ಲಿ (Bike Accident) ಇನ್ನೇನು 15 ದಿನಗಳಲ್ಲಿ ಹನೆಮಣೆ ಏರಬೇಕಿದ್ದ ಯುವತಿಯೊಬ್ಬಳು ಸಾವನ್ನಪ್ಪಿದ್ದಾಳೆ.

ಮೃತ ಯುವತಿಯನ್ನು ಕವಿತಾ (26) ಎಂದು ಗುರುತಿಸಲಾಗಿದೆ. ಆಕೆ ತನ್ನ ಸಹೋದರನ ಜೊತೆ ಬೈಕ್‌ನಲ್ಲಿ ಹೋಗುತ್ತಿದ್ದಾಗ ಈ ಆಫಘಾತ ಸಂಭವಿಸಿದೆ. ಇನ್ನೊಂದು ಬೈಕ್‌ನಲ್ಲಿ ಮಿತಿಮೀರಿದ ಲಗೇಜ್‌ ತುಂಬಿಕೊಂಡ ವ್ಯಕ್ತಿ ಇವರು ಹೋಗುತ್ತಿದ್ದ ಬೈಕ್‌ಗೆ ತಾಕಿಸಿದ್ದಾನೆ. ಈ ವೇಳೆ ಯುವತಿಯ ಸಹೋದರ ಫುಟ್‌ಪಾತ್‌ ಮೇಲೆ ಬಿದ್ದರೆ, ಆಕೆ ರಸ್ತೆಗೆ ಬಿದ್ದಿದ್ದಳು. ಈ ವೇಳೆ ಹಿಂದೆ ಇದ್ದ ಸಿಟಿ ಬಸ್‌ ಆಕೆಯ ಮೇಲೆ ಹರಿದಿದೆ. ಪರಿಣಾಮ ಕವಿತಾ ಸ್ಥಳದಲ್ಲೇ ಸಾವಿಗೀಡಾಗಿದ್ದಾಳೆ. ಇದನ್ನೂ ಓದಿ: ಬೆಂಗಳೂರಿನಲ್ಲಿ ಕಾರ್ ಡ್ರೈವರ್‌ನ ಭೀಕರ ಕೊಲೆ – ಸ್ನೇಹಿತರಿಂದಲೇ ಹತ್ಯೆ ಶಂಕೆ

ಕವಿತಾಳಿಗೆ ಮದುವೆ ನಿಶ್ಚಯವಾಗಿತ್ತು, ಆಕೆ 15 ದಿನಗಳಲ್ಲಿ ಹಸೆಮಣೆ ಏರಬೇಕಿತ್ತು. ದುರಾದೃಷ್ಟವಶಾತ್‌ ಆಕೆ ಅಪಘಾತದಲ್ಲಿ ಸಾವನ್ನಪ್ಪಿದ್ದಾಳೆ. ಕುಟುಂಬಸ್ಥರ ಆಕ್ರಂದನ ಮುಗಿಲುಮುಟ್ಟಿದೆ. ಇದನ್ನೂ ಓದಿ: ಕುಂದಾಪುರ | ಪ್ರವಾಸಕ್ಕೆ ಬಂದಿದ್ದ ಬೆಂಗ್ಳೂರಿನ ಮೂವರು ಯುವಕರು ಸಮುದ್ರ ಪಾಲು

Share This Article