ಬೈಕ್‍ಗಳ ನಡುವೆ ಡಿಕ್ಕಿ – ಲಾರಿಯಡಿ ಸಿಲುಕಿ ಸವಾರ ಸ್ಥಳದಲ್ಲೇ ಸಾವು

Public TV
1 Min Read

ಬೆಂಗಳೂರು: ಯೂಟರ್ನ್ ಮಾಡುವಾಗ ಬೈಕ್‍ಗೆ ಹಿಂದಿನಿಂದ ಮತ್ತೊಂದು ಬೈಕ್ ಡಿಕ್ಕಿ ಹೊಡೆದ ಪರಿಣಾಮ ಎದುರಿನಿಂದ ಬರುತ್ತಿದ್ದ ಲಾರಿ ಅಡಿಗೆ ಬೈಕ್ ಸವಾರ ಸಿಲುಕಿ ಸ್ಥಳದಲ್ಲೇ ಸಾವನಪ್ಪಿರುವ ಘಟನೆ ಕರ್ನಾಟಕ, ತಮಿಳುನಾಡು ಗಡಿಯಲ್ಲಿ ನಡೆದಿದೆ.

ಹೊಸೂರು ತಳಿ ರಸ್ತೆಯಲ್ಲಿ ಬೈಕ್ ಸವಾರನೊಬ್ಬ ಯೂಟರ್ನ್ ಮಾಡುವಾಗ ಹಿಂಬದಿಯಿಂದ ಮತ್ತೊಂದು ಬೈಕ್ ಡಿಕ್ಕಿಯಾಗಿ ಬೈಕ್ ಸವಾರ ಎದುರಿನ ರಸ್ತೆ ಮೇಲೆ ಬಿದ್ದಿದ್ದಾನೆ. ಈ ವೇಳೆ ಎದುರಿನಿಂದ ಬರುತ್ತಿದ್ದ ಲಾರಿ ಬೈಕ್ ಸವಾರನ ಮೇಲೆ ಹರಿದ ಪರಿಣಾಮ ಆತ ಸ್ಥಳದಲ್ಲೇ ಸಾವನಪ್ಪಿದ್ದಾನೆ. ಇದನ್ನೂ ಓದಿ: ದಾಂಪತ್ಯಕ್ಕೆ ಅಂತ್ಯ ಹಾಡಿದ ಸಮಂತಾ, ನಾಗ ಚೈತನ್ಯ

ಮೃತನನ್ನು ಹೊಸೂರು ಟೌನ್ ನಿವಾಸಿ ತರುಣ್(19)ಎಂದು ಗುರುತಿಸಲಾಗಿದೆ. ಅಪಘಾತದ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಸ್ಥಳಕ್ಕೆ ಹೊಸೂರು ಟೌನ್ ಪೊಲೀಸರು ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಇದನ್ನೂ ಓದಿ: ಭಾರತದ 20 ಲಕ್ಷ ವಾಟ್ಸಪ್ ಖಾತೆಗಳು ಬ್ಯಾನ್

Share This Article
Leave a Comment

Leave a Reply

Your email address will not be published. Required fields are marked *