ಕಾರ್ ಡಿಕ್ಕಿಯಾಗಿ ಬೈಕ್ ಸವಾರ ಸಾವು- ಸ್ಥಳೀಯರಿಂದ ರಸ್ತೆ ತಡೆದು ಪ್ರತಿಭಟನೆ

Public TV
1 Min Read

ಹಾಸನ: ಬೈಕ್ ಸವಾರನಿಗೆ ಹಿಂಬದಿಯಿಂದ ಕಾರ್ ಡಿಕ್ಕಿ ಹೊಡೆದ ಪರಿಣಾಮ ಸವಾರ ಸ್ಥಳದಲ್ಲಯೇ ಮೃತಪಟ್ಟು, ಹಿಂಬದಿ ಸವಾರ ಗಂಭೀರವಾಗಿ ಗಾಯಗೊಂಡ ಘಟನೆ ಹಾಸನದಲ್ಲಿ ನಡೆದಿದೆ.

25 ವರ್ಷದ ಮಹೇಶ್ ಮೃತ ಬೈಕ್ ಸವಾರ. ಚನ್ನರಾಯಪಟ್ಟಣ ಹೊರವಲಯ ಬೆಲಸಿಂದ ಗ್ರಾಮದ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಈ ಘಟನೆ ನಡೆದಿದೆ. ಘಟನೆಯಲ್ಲಿ ಗಾಯಗೊಂಡವ ಮತ್ತೊಬ್ಬರನ್ನು ಸದ್ಯ ಚನ್ನರಾಯಪಟ್ಟಣ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಘಟನೆಯ ಬಳಿಕ ಆಕ್ರೋಶಗೊಂಡ ಸ್ಥಳೀಯರು ಪ್ರತಿಭಟನೆಗೆ ಮುಂದಾಗಿದ್ದು ವಾಹನ ಸಂಚಾರ ಅಸ್ತವ್ಯಸ್ತವಾಗಿದೆ.

ರಸ್ತೆ ಮಧ್ಯೆ ಕಲ್ಲು ಇಟ್ಟು ಪ್ರತಿಭಟನಾಕಾರರು ತಮ್ಮ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅಲ್ಲದೇ ರಾಷ್ಟ್ರೀಯ ಹೆದ್ದಾರಿ ಬಳಿ ಅಧಿಕಾರಿಗಳ ಬರಬೇಕೆಂದು ಪಟ್ಟು ಹಿಡಿದಿದ್ದಾರೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದು ಪರಿಶೀಲನೆಗೆ ಮುಂದಾಗಿದ್ದಾರೆ.

ಪದೇಪದೇ ಇಲ್ಲಿ ಅಪಘಾತಗಳು ನಡೆಯುತಿದ್ದು, ಸಾಕಷ್ಟು ಮಂದಿ ಅಮಾಯಕರು ಪ್ರಾಣ ಕಳೆದುಕೊಂಡಿದ್ದಾರೆ. ಇದಕ್ಕೆಲ್ಲ ಅವೈಜ್ಞಾನಿಕ ರೀತಿಯಲ್ಲಿ ಮಾಡಲಾಗಿರೋ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಯೇ ಕಾರಣ ಎಂದು ಸಾರ್ವಜನಿಕರು ಕಿಡಿಕಾರಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *