ಅವೈಜ್ಞಾನಿಕ ಹೆದ್ದಾರಿ ಕಾಮಗಾರಿಗೆ ಬೈಕ್ ಸವಾರ ಬಲಿ

Public TV
1 Min Read

ಚಿಕ್ಕಬಳ್ಳಾಪುರ: ರಾಜ್ಯ ಹೆದ್ದಾರಿಯಿಂದ ರಾಷ್ಟ್ರೀಯ ಹೆದ್ದಾರಿಯಾಗಿ ರೂಪುಗೊಳ್ಳುತ್ತಿರುವ ನ್ಯಾಷನಲ್ ಹೈವೇ 224 ರ ಅವೈಜ್ಞಾನಿಕ ಕಾಮಗಾರಿಗೆ ಬೈಕ್ ಸವಾರರೊಬ್ಬರು ಬಲಿಯಾಗಿದ್ದಾರೆ.

ಗೌಡಗೆರೆ ಗ್ರಾಮದ 30 ವರ್ಷದ ದೇವರಾಜ್ ಮೃತ ವ್ಯಕ್ತಿ ಎಂದು ಗುರುತಿಸಲಾಗಿದೆ. ಚಿಕ್ಕಬಳ್ಳಾಪುರ-ಗೌರಿಬಿದನೂರು ಮಾರ್ಗದ ಪೋಶೆಟ್ಟೆಹಳ್ಳಿ ಬಳಿ ಮೋರಿ ನಿರ್ಮಾಣಕ್ಕೆ ಎಂದು ಅಗೆಯಲಾಗಿದ್ದ ಬೃಹತ್ ಗುಂಡಿಗೆ ಬೈಕ್ ಸಮೇತ ಸವಾರ ಬಿದ್ದು ಸಾವನ್ನಪ್ಪಿದ್ದಾರೆ.

ಈ ಸಂಬಂಧ ಮೃತನ ಸಂಬಂಧಿಕರು ಹಾಗೂ ಸ್ಥಳೀಯ ಗ್ರಾಮಸ್ಥರು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳು ಹಾಗೂ ಕಾಮಗಾರಿ ನಡೆಸುತ್ತಿರುವ ಗುತ್ತಿಗೆದಾರರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಗೌರಿಬಿದನೂರು-ಚಿಕ್ಕಬಳ್ಳಾಪುರ ಮಾರ್ಗದ ರಸ್ತೆ ತಡೆ ನಡೆಸಿದ್ದಾರೆ.

ಸ್ಥಳಕ್ಕೆ ಭೇಟಿ ನೀಡಿದ ಚಿಕ್ಕಬಳ್ಳಾಪುರ ಡಿವೈಎಸ್‍ಪಿ ಹಾಗೂ ಪೊಲೀಸರು ಪ್ರತಿಭಟನಕಾರರ ಮನವೊಲಿಸಿದ್ದಾರೆ. ಈ ಹಿಂದೆಯೂ ಸಹ ಹಲವು ಬೈಕ್ ಸವಾರರು ಈ ಹೆದ್ದಾರಿ ಕಾಮಗಾರಿಗೆ ಬಲಿಯಾಗಿದ್ದಾರೆ ಎಂದು ತಿಳಿದುಬಂದಿದೆ.

Share This Article
Leave a Comment

Leave a Reply

Your email address will not be published. Required fields are marked *