ಕೇರಳದ ಆಲಪ್ಪುಳದಲ್ಲಿ ಹಕ್ಕಿಜ್ವರ – ಕೋಳಿ, ಮೊಟ್ಟೆ ನಾಶಕ್ಕೆ ಸರ್ಕಾರ ಆದೇಶ

Public TV
1 Min Read

ತಿರುವನಂತಪುರಂ: ಕೇರಳದ ಆಲಪ್ಪುಳದ ಕುಟ್ಟನಾಡ್ ಪ್ರದೇಶದಲ್ಲಿ ಹಕ್ಕಿ ಜ್ವರ ಪ್ರಕರಣ ದೃಢಪಟ್ಟಿರುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ.

ಕಳೆದ ವಾರ ಆಲಪ್ಪುಳ ಜಿಲ್ಲೆಯ ಕೋಟ್ಟನಾಡ್‍ನಲ್ಲಿ ರೈತರೊಬ್ಬರು ಸಾಕಿದ್ದ ಸಾವಿರಾರು ಬಾತುಕೋಳಿಗಳು ಮತ್ತು ಸ್ಥಳೀಯ ಹಕ್ಕಿಗಳು ಸತ್ತ ಹಿನ್ನೆಲೆ ಅಧಿಕಾರಿಗಳು ಭೋಪಾಲ್‍ನ ನ್ಯಾಷನಲ್ ಇನ್‍ಸ್ಟಿಟ್ಯೂಟ್ ಆಫ್ ಹೈ ಸೆಕ್ಯುರಿಟಿ ಅನಿಮಲ್ ಡಿಸೀಸ್‍ಗೆ ಮಾದರಿಗಳನ್ನು ಕಳುಹಿಸಿದ್ದರು. ಇದೀಗ ಹಕ್ಕಿ ಜ್ವರ ಪ್ರಕರಣಗಳು ದೃಢಪಟ್ಟಿದೆ.

ಹೀಗಾಗಿ ಹಕ್ಕಿ ಜ್ವರ ಹರಡದಂತೆ ರೋಗ ಪೀಡಿತ ಪ್ರದೇಶದಲ್ಲಿರುವ ಬಾತುಕೋಳಿಗಳನ್ನು ಕೊಲ್ಲಲು ಪಶುವೈದ್ಯಾಧಿಕಾರಿಗಳು ಸಲಹೆ ನೀಡಿದ್ದಾರೆ. ಇದೀಗ ಪ್ರಕರಣ ಪತ್ತೆಯಾದ ಸ್ಥಳದಿಂದ ಒಂದು ಕಿ.ಮೀ ವ್ಯಾಪ್ತಿಯಲ್ಲಿರುವ ಬಾತುಕೋಳಿಗಳು, ಕೋಳಿಗಳು, ಮೊಟ್ಟೆಗಳು ಮತ್ತು ಇತರ ಪಕ್ಷಿಗಳನ್ನು ನಾಶಗೊಳಿಸಲು ಸರ್ಕಾರ ಆದೇಶಿಸಿದೆ. ಇದನ್ನೂ ಓದಿ: ಮೆಕ್ಸಿಕೋ ಅಪಘಾತ – 49 ಮಂದಿ ಸಾವು, 58 ಮಂದಿಗೆ ಗಾಯ

ಸೋಂಕು ಹರಡುವುದನ್ನು ತಡೆಗಟ್ಟಲು 12 ಕಿ.ಮೀ. ದೂರದಲ್ಲಿರುವ ಬಾತುಕೋಳಿಗಳು, ಕೋಳಿಗಳು, ಮೊಟ್ಟೆಗಳು, ಗೊಬ್ಬರ ಮತ್ತು ಇತರ ಹಕ್ಕಿಗಳ ಚಲನೆಯ ಮೇಲೆ ನಿರ್ಬಂಧ ಹೇರಲಾಗಿದೆ. ಈ ವರ್ಷ ಕೇರಳದಲ್ಲಿ ಎರಡನೇ ಬಾರಿಗೆ ಹಕ್ಕಿ ಜ್ವರ ದೃಢಪಟ್ಟಿದೆ. ಇದನ್ನೂ ಓದಿ: ರಾವತ್, ಸೇನಾಧಿಕಾರಿಗಳ ಮರಣ ಸಂಭ್ರಮಿಸಿದ ಕಿಡಿಗೇಡಿಗಳ ವಿರುದ್ಧ ಪ್ರತಾಪ್ ಸಿಂಹ ಆಕ್ರೋಶ

Share This Article
Leave a Comment

Leave a Reply

Your email address will not be published. Required fields are marked *