ಹಕ್ಕಿ ಜ್ವರ ದೃಢ- ಮೈಸೂರಿನಲ್ಲಿ 6,436 ಪಕ್ಷಿಗಳ ವಧೆಗೆ ನಿರ್ಧಾರ

Public TV
1 Min Read

ಮೈಸೂರು: ನಗರದಲ್ಲಿ ಹಕ್ಕಿ ಜ್ವರ ದೃಢವಾದ ಹಿನ್ನೆಲೆಯಲ್ಲಿ ಜಿಲ್ಲಾಡಳಿತವು ಪಕ್ಷಿ ಸರ್ವೆ ಕಾರ್ಯ ಆರಂಭಿಸಿದೆ.

ಮೈಸೂರಿನ ಕುಂಬಾರಕೊಪ್ಪಲು ಮನೆಯೊಂದರಲ್ಲಿ ಇತ್ತೀಚೆಗೆ ಸತ್ತಿದ್ದ ಕೋಳಿ ಹಾಗೂ ಸ್ಮಶಾನದಲ್ಲಿ ಮೃತಪಟ್ಟಿದ್ದ ಪಕ್ಷಿಯ ಮೃತದೇಹದ ಮಾದರಿಗಳನ್ನು ಭೂಪಾಲ್‍ನ ನ್ಯಾಷನಲ್ ಇನ್ಸ್ ಟಿಟ್ಯೂಟ್ ಹೈಸೆಕ್ಯೂರಿಟಿ ಅನಿಮಲ್ ಡೀಸಿಸ್‍ಗೆ ಕಳುಹಿಸಲಾಗಿತ್ತು. ಮೈಸೂರಿನಿಂದ ಕಳುಹಿಸಿದ್ದ ಏಳು ಮಾದರಿಗಳಲ್ಲಿ ಎರಡು ಮಾದವರಿಗಳು ಪಾಸಿಟಿವ್ ಬಂದಿದೆ. ಇದನ್ನೂ ಓದಿ: ಹಕ್ಕಿ ಜ್ವರ ಖಾತ್ರಿ- ಕುಂಬಾರಕೊಪ್ಪಲಿನ 10 ಕಿ.ಮೀ ವ್ಯಾಪ್ತಿಯಲ್ಲಿ ಕೋಳಿ ಮಾರಾಟ ನಿಷೇಧ

ಈ ನಿಟ್ಟಿನಲ್ಲಿ ಜಿಲ್ಲಾಡಳಿತವು ತಕ್ಷಣವೇ ಸಾಕು ಪಕ್ಷಿಗಳ ಸರ್ವೆ ನಡೆಸಿ, ಮೂರ್ನಾಲ್ಕು ದಿನಗಳಲ್ಲಿ 6,436 ಪಕ್ಷಿಗಳನ್ನು ಕೊಲ್ಲಲು ರ್ನಿಧರಿಸಿದೆ. ಜೊತೆಗೆ ಹಕ್ಕಿಜ್ವರ ಪತ್ತೆಯಾದ ಮೈಸೂರಿನ ಕುಂಬಾರಕೊಪ್ಪಲಿನ ಒಂದು ಕಿಲೋ ಮೀಟರ್ ವ್ಯಾಪ್ತಿಯಲ್ಲಿ ಸರ್ವೆ ಕಾರ್ಯ ನಡೆಸಲಾಗಿದೆ. ಈವರೆಗೆ ಒಟ್ಟು 6,436 ಪಕ್ಷಿಗಳನ್ನು ಅಧಿಕಾರಿಗಳು ಗುರುತಿಸಿದ್ದಾರೆ. ಹೀಗಾಗಿ ಕುಂಬಾರಕೊಪ್ಪಲಿನ 10 ಕಿ.ಮೀ. ವ್ಯಾಪ್ತಿಯನ್ನು ಸೂಕ್ಷ್ಮ ವಲಯ ಎಂದು ಘೋಷಣೆ ಮಾಡಲಾಗಿದೆ.

ಸೂಕ್ಷ್ಮ ವಲಯದ ವ್ಯಾಪ್ತಿಯಲ್ಲಿ ಒಟ್ಟು 17,820 ಮನೆಗಳಿವೆ. ಅದರಲ್ಲಿ 144 ಮನೆಗಳಲ್ಲಿ ಪಕ್ಷಿಗಳಿವೆ. ಈ ಪೈಕಿ ನೈಸರ್ಗಿಕ ಪಕ್ಷಿಗಳು 1,252, ಔದ್ಯಮಿಕ ಪಕ್ಷಿಗಳು 5,100 ಹಾಗೂ ಸಾಕು ಪಕ್ಷಿಗಳು 254 ಎಂದು ಗುರುತಿಸಲಾಗಿದೆ. ಇದರಲ್ಲಿ ಕ್ವೈಲ್ಸ್ 12 ಹಾಗೂ ಟರ್ಕಿ 18 ಸೇರಿದ್ದು ಒಟ್ಟು 6,436 ಪಕ್ಷಿಗಳಿದ್ದು, ಎಲ್ಲವನ್ನೂ ನಾಶಪಡಿಸಲು ನಿರ್ಧರಿಸಲಾಗಿದೆ.

Share This Article
Leave a Comment

Leave a Reply

Your email address will not be published. Required fields are marked *