ಕಾರಾಗೃಹದಲ್ಲಿ ಬರ್ತ್ ಡೇ ಸೆಲೆಬ್ರೇಷನ್ – ಬಿಡುಗಡೆಯಾಗ್ತಿದಂತೆ ಮತ್ತೆ ರೌಡಿಶೀಟರ್ ಬಂಧನ

Public TV
1 Min Read

ರಾಮನಗರ: ಜಿಲ್ಲಾ ಕಾರಾಗೃಹದಲ್ಲಿ (Jail) ಬರ್ತ್ ಡೇ ಸೆಲೆಬ್ರೇಷನ್ (Birthday Celebration) ಪ್ರಕರಣ ಸಂಬಂಧ ಹುಟ್ಟುಹಬ್ಬ ಆಚರಿಸಿಕೊಂಡಿದ್ದ ರೌಡಿಶೀಟರ್ ಕಿರಣ್ ಅಲಿಯಾಸ್ ತಮಟೆ ಸೇರಿ ಐವರ ಮೇಲೆ ಎಫ್‌ಐಆರ್ ದಾಖಲಾಗಿತ್ತು. ಈ ಹಿನ್ನೆಲೆ ಬುಧವಾರ ಸಂಜೆ ಶಿಕ್ಷೆ ಅವಧಿ ಮುಗಿದು ಜೈಲಿನಿಂದ ಬಿಡುಗಡೆಯಾಗಿದ್ದ ಕಿರಣ್‌ನನ್ನು ಮತ್ತೆ ರಾಮನಗರ ಟೌನ್ ಪೊಲೀಸರು (Ramanagara Police) ಬಂಧಿಸಿದ್ದಾರೆ.

ಜೈಲಿನಿಂದ ಕಿರಣ್ ಹೊರಬರುತ್ತಿದ್ದಂತೆಯೇ ಪೊಲೀಸರು ಆತನನ್ನು ಬಂಧಿಸಿ ಠಾಣೆಗೆ ಕರೆದೊಯ್ದಿದ್ದಾರೆ. ಹಲವು ಪ್ರಕರಣಗಳಲ್ಲಿ ಭಾಗಿಯಾಗಿದ್ದ ಕಿರಣ್ ರಾಬರಿ ಕೇಸ್‌ನಲ್ಲಿ ಜೈಲು ಸೇರಿದ್ದ. ಬುಧವಾರ ಶಿಕ್ಷೆ ಅವಧಿ ಮುಕ್ತಾಯವಾಗಿತ್ತು. ಆದರೆ ಜೈಲಿನಲ್ಲೇ ಹುಟ್ಟುಹಬ್ಬ ಆಚರಿಸಿಕೊಂಡು ಸಾಮಾಜಿಕ ಜಾಲತಾಣದಲ್ಲಿ ಫೋಟೋ ಹಂಚಿಕೊಂಡಿದ್ದ ಕಿರಣ್ ಇದೀಗ ಮತ್ತೆ ಪೊಲೀಸರ ಅತಿಥಿಯಾಗಿದ್ದಾನೆ. ಇದನ್ನೂ ಓದಿ: ಕಪ್ಪು ಬಟ್ಟೆ ಧರಿಸಿ ಬಂದವ್ರಿಗೆ ನಮೋ ಕಾರ್ಯಕ್ರಮಕ್ಕೆ ನೋ ಎಂಟ್ರಿ- ಯುವತಿಯರಿಗೆ ಅಸಮಾಧಾನ

ರೌಡಿಶೀಟರ್ ಕಿರಣ್‌ನ ಹುಟ್ಟುಹಬ್ಬವನ್ನು ಜೈಲಿನಲ್ಲಿಯೇ ಆಚರಿಸಿ ಕೇಕ್ ಕತ್ತರಿಸಲಾಗಿತ್ತು. ಕೈದಿಗಳು ಹುಟ್ಟುಹಬ್ಬವನ್ನು ಆಚರಿಸಿ ಸಾಮಾಜಿಕ ಮಾಧ್ಯಮಗಳಲ್ಲಿ ಫೋಟೋಗಳನ್ನು ಹಂಚಿಕೊಂಡಿದ್ದರು. ಹ್ಯಾಪಿ ಬರ್ತ್ ಡೇ ಕಿರಣ್ ಅಣ್ಣ ಎಂದು ಹೂವಿನಲ್ಲಿ ಬರೆದು ಗ್ರೂಪ್ ಫೋಟೋ ತೆಗೆದುಕೊಂಡಿದ್ದ 2 ಫೋಟೋಗಳು ವೈರಲ್ ಆಗಿದ್ದವು.

ಜೈಲಿನ ಒಳಗಡೆ ಕೇಕ್ ತೆಗೆದುಕೊಂಡು ಹೋಗಲು ಅಧಿಕಾರಿ, ಸಿಬ್ಬಂದಿಯೇ ಸಾಥ್ ನೀಡಿದ್ದಾರೆ. ಕೈದಿಗಳು ಹುಟ್ಟುಹಬ್ಬ ಆಚರಿಸಿಕೊಳ್ಳಲು ಜೈಲಿನ ಅಧಿಕಾರಿಗಳೇ ಸಾಥ್ ನೀಡಿದ್ದಾರೆ ಎಂಬ ಆರೋಪ ಬಂದಿದೆ. ಇದನ್ನೂ ಓದಿ: ಚಿಕ್ಕಮಗಳೂರು, ಕೊಡಗನ್ನು ಸ್ವಿಜರ್ಲ್ಯಾಂಡ್ ರೀತಿ ಬೆಳೆಸಿ – ಎಷ್ಟು ಬೇಕಾದ್ರೂ ಹಣ ಕೊಡ್ತೀವಿ: ಬೊಮ್ಮಾಯಿ

Live Tv
[brid partner=56869869 player=32851 video=960834 autoplay=true]

Join our Whatsapp group by clicking the below link
https://chat.whatsapp.com/E6YVEDajTzH06LOh77r25k

Share This Article
Leave a Comment

Leave a Reply

Your email address will not be published. Required fields are marked *