ಸಂಸದ, ಶಾಸಕ ತಲ್ವಾರ್ ಹಿಡಿದ ಫೋಟೋ ಫೇಸ್‍ಬುಕ್‍ಗೆ ಅಪ್ಲೋಡ್..!

Public TV
1 Min Read

– ನೀತಿ ಸಂಹಿತೆ ಉಲ್ಲಂಘಿಸಿದ ಬಿಜೆಪಿ ಕಾರ್ಯಕರ್ತರು

ಧಾರವಾಡ: ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಚುನಾವಣಾ ನೀತಿ ಸಂಹಿತೆ ಜಾರಿ ಇದ್ದಾಗಲೇ ಬಿಜೆಪಿ ಸಂಸದ ಪ್ರಹ್ಲಾದ್ ಜೋಶಿ ಹಾಗೂ ಶಾಸಕ ಅರವಿಂದ್ ಬೆಲ್ಲದ ಅವರು ತಲ್ವಾರ್ ಹಿಡಿದ ಫೋಟೋವನ್ನು ಬಿಜೆಪಿ ಕಾರ್ಯಕರ್ತರು ಸಾಮಾಜಿಕ ಜಾಲತಾಣಗಳಲ್ಲಿ ಹಾಕಿ ನೀತಿ ಸಂಹಿತೆ ನಿಯಮವನ್ನು ಉಲ್ಲಂಘಿಸಿದ್ದಾರೆ.

ಪ್ರಹ್ಲಾದ್ ಜೋಶಿ ಮತ್ತು ಅರವಿಂದ ಬೆಲ್ಲದ ಕೈಯಲ್ಲಿ ತಲ್ವಾರ್ ಹಿಡಿದ ಫೋಟೋವನ್ನು ಬಿಜೆಪಿ ಪಕ್ಷದ ಕಾರ್ಯಕರ್ತರೊಬ್ಬರು ತಮ್ಮ ಫೇಸ್‍ಬುಕ್‍ನಲ್ಲಿ ಪೋಸ್ಟ್ ಮಾಡಿದ್ದಾರೆ.

ನೀತಿ ಸಂಹಿತೆ ಜಾರಿಯಲ್ಲಿದ್ದಾಗ ಯಾವುದೇ ಆಯುಧ ಪ್ರದರ್ಶಿಸಬಾರದು. ಆಯುಧ ಹಿಡಿದ ಫೋಟೋ ಕೂಡ ಸಾರ್ವಜನಿಕವಾಗಿ ಹಂಚಿಕೊಳ್ಳೋದು ಕೂಡ ತಪ್ಪು. ಆದ್ರೆ ಬಿಜೆಪಿ ಕಾರ್ಯಕರ್ತ, ಜೋಶಿ ಹಾಗೂ ಬೆಲ್ಲದ ತಲ್ವಾರ್ ಹಿಡಿದ ಫೋಟೋ ಹಾಕಿ ಮತ್ತೊಮ್ಮೆ ನಾವೇ ಗೆಲ್ಲೋದು ಎಂದು ಪೋಸ್ಟ್ ಮಾಡಿದ್ದಾರೆ.

ಶಕ್ತಿ ಧಾರವಾಡ ಬಿಜೆಪಿ ಯುವಮೋರ್ಚಾ ಕಾರ್ಯಕರ್ತ, ಎರಡು ದಿನಗಳ ಹಿಂದೆ ಧಾರವಾಡದ ಅಶೋಕ ಹೊಟೇಲ್‍ಗೆ ಬಂದಾಗ ಜನಪ್ರತಿನಿಧಿಗಳು ತಲ್ವಾರ್ ಹಿಡಿದು ಫೋಟೋಗೆ ಪೋಸ್ ಕೊಟ್ಟಿದ್ದರು. ಅದೇ ಫೋಟೋವನ್ನು ನೀತಿ ಸಂಹಿತೆ ಜಾರಿಯಾದ ಬಳಿಕ ಕಾರ್ಯಕರ್ತ ಪೋಸ್ಟ್ ಮಾಡಿ ಚುನಾವಣಾ ಆಯೋಗದ ನಿಯಮವನ್ನು ಉಲ್ಲಂಘಿಸಿದ್ದಾರೆ.

https://www.facebook.com/shakti.hiremath/posts/2113167555464960

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

Share This Article
Leave a Comment

Leave a Reply

Your email address will not be published. Required fields are marked *