ಊಟ ಮುಗಿಸಿ ಮನೆಗೆ ಹೊರಟಿದ್ದ ಬಿಜೆಪಿ ಕಾರ್ಯಕರ್ತನ ಮೇಲೆ ಮಾರಣಾಂತಿಕ ಹಲ್ಲೆ

Public TV
1 Min Read

ಹುಬ್ಬಳ್ಳಿ: ನಗರದ ಕೇಶವಾಪುರದ ಶಾಂತಿನಗರ ಚರ್ಚ್ ಬಳಿ ಸ್ನೇಹಿತರ ಜೊತೆ ಊಟ ಮಾಡಿ ಮನಗೆ ತೆರಳುವಾಗ ಬಿಜೆಪಿ ರಾಜ್ಯ ಸ್ಲಮ್ ಮೋರ್ಚಾ ಕಾರ್ಯದರ್ಶಿ ಲಕ್ಷ್ಮಣ್ ಕೊರಪಾಟಿ ಎಂಬವರ ಮೇಲೆ ಮಾರಣಾಂತಿಕ ಹಲ್ಲೆ ನಡೆದಿದೆ.

ಲಕ್ಷ್ಮಣ್ ಕೊರಪಾಟಿ ತಮ್ಮ ಬೈಕ್ ನಲ್ಲಿ ಮನೆಗೆ ತೆರಳುವಾಗ ಬೈಕ್‍ನಲ್ಲಿ ಅವರನ್ನು ಹಿಂಬಾಲಿಸಿಕೊಂಡು ಬಂದ ಮೂವರು ದುಷ್ಕರ್ಮಿಗಳು ಮಚ್ಚು ಲಾಂಗ್ ಮತ್ತು ಹಾಕಿ ಸ್ಟಿಕ್ ನಿಂದ ಹಲ್ಲೆ ಮಾಡಿದ್ದಾರೆ. ಈ ವೇಳೆ ಸ್ಥಳೀಯರು ಲಕ್ಷ್ಮಣ್ ಕೊರಪಾಟಿ ಅವರ ಸಹಾಯಕ್ಕೆ ಬಂದ್ದಿದ್ದಾರೆ. ಕೂಡಲೇ ದುಷ್ಕರ್ಮಿಗಳು ಅಲ್ಲಿಂದ ಪರಾರಿಯಾಗಿದ್ದಾರೆ.

ನಾನು ಕಳೆದ 22 ವರ್ಷಗಳಿಂದ ಭಾರತೀಯ ಜನತಾ ಪಾರ್ಟಿಯಲ್ಲಿ ಗುರುತಿಸಿಕೊಂಡಿದ್ದೇನೆ. ನನ್ನ ಅಭಿವೃದ್ಧಿಯನ್ನು ಸಹಿಸದ ವಿರೋಧಿಗಳು ನನ್ನ ಮೇಲೆ ದಾಳಿ ನಡೆಸಿರಬಹುದು. ಇದರಲ್ಲಿ ರಾಜಕೀಯ ಷಡ್ಯಂತ್ರ ಅಡಗಿದೆ. ಹಲ್ಲೆ ಮಾಡಿದ ದುಷ್ಕರ್ಮಿಗಳೆಲ್ಲಾ ಯುವಕರೇ, ಆದ್ರೆ ಅವರು ಯಾರೆಂಬುದು ನನಗೆ ಗೊತ್ತಿಲ್ಲ. ಈ ಬಗ್ಗೆ ಪೊಲೀಸ್ ಅಧಿಕಾರಿಗಳು ತನಿಖೆ ನಡೆಸುತ್ತೇವೆ ಎಂದು ಹೇಳಿದ್ದಾರೆ. ದಾಳಿಯ ನಂತರ ನಾನು ಬದುಕಿ ಬಂದಿರುವುದೇ ಒಂದು ಪವಾಡವಾಗಿದೆ ಎಂದು ಹಲ್ಲೆಗೊಳಗಾದ ಲಕ್ಷ್ಮಣ್ ಹೇಳಿದ್ದಾರೆ.

ಘಟನೆಯಲ್ಲಿ ಗಾಯಗೊಂಡ ಲಕ್ಷ್ಮಣ್ ಅವರನ್ನು ನಗರದ ಕಿಮ್ಸ್ ಗೆ ದಾಖಲು ಮಾಡಲಾಗಿದ್ದು, ಪ್ರಾಣಪಾಯದಿಂದ ಪಾರಾಗಿದ್ದಾರೆ. ಈ ಸಂಬಂಧ ಆಶೋಕ್ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share This Article
Leave a Comment

Leave a Reply

Your email address will not be published. Required fields are marked *