ಕಾಶ್ಮೀರದಲ್ಲಿ ನಡೆದ ಹಿಂಸಾಚಾರಕ್ಕೆ ‘ದಿ ಕಾಶ್ಮೀರ್ ಫೈಲ್ಸ್’ ಚಿತ್ರವೇ ಕಾರಣ: ಮೆಹಬೂಬಾ ಮುಫ್ತಿ

Public TV
1 Min Read

ಶ್ರೀನಗರ: ಕಾಶ್ಮೀರ ಕಣಿವೆಯಲ್ಲಿ ಇತ್ತೀಚೆಗೆ ನಡೆದ ಹಿಂಸಾಚಾರಕ್ಕೆ ವಿವೇಕ್ ಅಗ್ನಿಹೋತ್ರಿ ನಿರ್ದೇಶನದ ‘ದಿ ಕಾಶ್ಮೀರ್ ಫೈಲ್ಸ್’ ಚಿತ್ರವೇ ಕಾರಣ ಎಂದು ಪೀಪಲ್ಸ್ ಡೆಮಾಕ್ರಟಿಕ್ ಪಾರ್ಟಿ(ಪಿಡಿಪಿ) ಮುಖ್ಯಸ್ಥೆ ಮತ್ತು ಜಮ್ಮು ಮತ್ತು ಕಾಶ್ಮೀರದ ಮಾಜಿ ಸಿಎಂ ಮೆಹಬೂಬಾ ಮುಫ್ತಿ ಆರೋಪಿಸಿದರು.

ಸರ್ಕಾರಿ ನೌಕರಾಗಿದ್ದ ಕಾಶ್ಮೀರಿ ಪಂಡಿತ್ ರಾಹುಲ್ ಭಟ್ ಹತ್ಯೆ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನಮ್ಮ ಸರ್ಕಾರವು ನನ್ನ ಅಧಿಕಾರಾವಧಿಯಲ್ಲಿ ಕಾಶ್ಮೀರಿ ಪಂಡಿತರಿಗೆ ಸುರಕ್ಷಿತ ವಾತಾವರಣವನ್ನು ನಿರ್ಮಿಸಿತ್ತು. 2016 ರಲ್ಲಿ ಈ ರೀತಿಯ ಯಾವುದೇ ಹತ್ಯೆ ನಡೆದಿಲ್ಲ. ‘ದಿ ಕಾಶ್ಮೀರ್ ಫೈಲ್ಸ್’ ಸಿನಿಮಾ ಈ ರೀತಿಯ ಹಿಂಸಾಚಾರವನ್ನು ಪ್ರಚೋದಿಸಿದೆ ಎಂದು ಆಕ್ರೋಶ ಹೊರಹಾಕಿದರು. ಈ ವೇಳೆ ಮುಫ್ತಿ ಅವರು ದೇಶದಲ್ಲಿ ದ್ವೇಷದ ವಾತಾವರಣವನ್ನು ಸೃಷ್ಟಿಸಿದ ‘ದಿ ಕಾಶ್ಮೀರ ಫೈಲ್ಸ್’ ಸಿನಿಮಾವನ್ನು ಬ್ಯಾನ್ ಮಾಡಬೇಕು ಎಂದು ಕರೆ ಕೊಟ್ಟರು. ಇದನ್ನೂ ಓದಿ: ಬಾಗಲಕೋಟೆ ಕೇಸ್‍ಗೆ ಟ್ವಿಸ್ಟ್ – ಮೊದಲು ಸಂಗೀತಾ ಹಲ್ಲೆ ಮಾಡಿದ್ದ ವೀಡಿಯೋ ವೈರಲ್ 

Gyanvapi Masjid 1

ಜ್ಞಾನವಾಪಿ ಮಸೀದಿಯ ವಿಷಯ ಕುರಿತು ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರವನ್ನು ಗುರಿಯಾಗಿಸಿಕೊಂಡು ಮಾತನಾಡಿದ ಅವರು, ನಿಜವಾದ ಸಮಸ್ಯೆಗಳನ್ನು ದೂರವಿಡಲು ಹಿಂದೂ-ಮುಸ್ಲಿಂ ಸಮಸ್ಯೆಗಳನ್ನು ಸೃಷ್ಟಿಸಲಾಗುತ್ತಿದೆ. ಈಗ ಜ್ಞಾನವಾಪಿ ಮಸೀದಿ ಸಮಸ್ಯೆ ಹಿಂದೆ ಇದ್ದಾರೆ. ನಾವು ಪೂಜಿಸುವುದೆಲ್ಲ ನಮ್ಮ ದೇವರು. ನೀವು ನೋಡುತ್ತಿರುವ ಎಲ್ಲ ಮಸೀದಿಗಳ ಪಟ್ಟಿಯನ್ನು ನಮಗೆ ನೀಡಿ ಎಂದು ಸವಾಲು ಹಾಕಿದರು. ಇದನ್ನೂ ಓದಿ: ಪಠ್ಯಕ್ರಮದಲ್ಲಿ RSS ಸಂಸ್ಥಾಪಕ ಹೆಡ್ಗೆವಾರ್ ಭಾಷಣ ಸೇರ್ಪಡೆ – ಶೀಘ್ರವೇ ಹಿಂತೆಗೆಯಲು ಕ್ಯಾಂಪಸ್ ಫ್ರಂಟ್ ಒತ್ತಾಯ 

Share This Article
Leave a Comment

Leave a Reply

Your email address will not be published. Required fields are marked *