ರಾಜ್ಯ ಚುನಾವಣೆ ಗೆಲ್ಲಲು ‘ವಾರ್ ಡೇಸ್’ ಘೋಷಿಸಿದ ಬಿಜೆಪಿ

Public TV
1 Min Read

ಬೆಂಗಳೂರು: ಶತಾಗತಯ ಕರ್ನಾಟಕದಲ್ಲಿ ಕಮಲ ಬಾವುಟ ಹಾರಿಸಲು ಪಣತೊಟ್ಟಿರುವ ಬಿಜೆಪಿ ವಾರ್ ಡೇಸ್ ಘೋಷಣೆ ಮಾಡಲಾಗಿದೆ. ಮೇ 1ರಿಂದ 9ರವರೆಗಿನ ಒಂಬತ್ತು ದಿನಗಳನ್ನು ‘ನವದಿನ ಯುದ್ಧ’ವಾಗಿ ಬಿಜೆಪಿ ಹೈಕಮಾಂಡ್ ಘೋಷಣೆ ಮಾಡಿದೆ.

ಈ ಒಂಬತ್ತು ದಿನಗಳಂದು ಕೇಂದ್ರ ನಾಯಕರು ರಾಜ್ಯದಲ್ಲಿ ಠಿಕಾಣಿ ಹೂಡಲಿದ್ದಾರೆ. ಇತ್ತ ಬಿಜೆಪಿ ಅಧಿಕಾರದಲಿರುವ ನಾಲ್ಕು ರಾಜ್ಯಗಳ ಸಿಎಂಗಳು ಕೂಡ ಪ್ರಚಾರದಲ್ಲಿ ಭಾಗಿಯಾಗಲಿದ್ದಾರೆ. ಅಮಿತ್ ಶಾ, ಯೋಗಿ ಆದಿತ್ಯನಾಥ್ ಸೇರಿದಂತೆ ಹಲವು ನಾಯಕರು ಚುನಾವಣಾ ಪ್ರಚಾರಕ್ಕಾಗಿ ಕರ್ನಾಟಕದಲ್ಲಿಯೇ ಉಳಿದುಕೊಳ್ಳಲಿದ್ದಾರೆ.

ಮೇ 1 ರಂದು ರಾಜ್ಯಕ್ಕೆ ಪ್ರಧಾನಿ ಮೋದಿ ಆಗಮಿಸಲಿದ್ದು, 5 ದಿನ ವಿವಿಧ ಜಿಲ್ಲೆಗಳಲ್ಲಿ ನಡೆಯುವ 15 ಕಾರ್ಯಕ್ರಮಗಳಲ್ಲಿ ಪ್ರಧಾನಿ ಮೋದಿ ಭಾಗಿಯಾಗಲಿದ್ದಾರೆ. ವಿಶೇಷ ಏನೆಂದರೆ ಬೆಂಗಳೂರಿನಲ್ಲಿ ಎರಡು ಬೃಹತ್ ರ್ಯಾಲಿಗಳಲ್ಲಿ ಮೋದಿ ಭಾಗಿಯಾಗಲಿದ್ದಾರೆ.

ಯಾವ ದಿನ? ಎಲ್ಲಿ ಕಾರ್ಯಕ್ರಮ?
ಮೇ 01- ಚಾಮರಾಜನಗರ, ಉಡುಪಿ, ಬೆಳಗಾವಿ
ಮೇ 03- ಕಲಬುರಗಿ, ಬಳ್ಳಾರಿ, ಬೆಂಗಳೂರು
ಮೇ 05 – ತುಮಕೂರು, ಶಿವಮೊಗ್ಗ, ಹುಬ್ಬಳ್ಳಿ
ಮೇ 07 – ರಾಯಚೂರು, ಚಿತ್ರದುರ್ಗ, ಕೋಲಾರ
ಮೇ 08 – ಬಿಜಾಪುರ, ಮಂಗಳೂರು, ಬೆಂಗಳೂರು

Share This Article
Leave a Comment

Leave a Reply

Your email address will not be published. Required fields are marked *