ಎಚ್‍ಡಿಕೆ ವಿಶ್ವಾಸಮತಯಾಚನೆ ವೇಳೆ ಬಿಜೆಪಿಯಿಂದ ಕಲಾಪ ಬಹಿಷ್ಕಾರ?

Public TV
0 Min Read

ಬೆಂಗಳೂರು: ಎಚ್.ಡಿ.ಕುಮಾರಸ್ವಾಮಿ ವಿಧಾನಸಭೆಯಲ್ಲಿ ವಿಶ್ವಾಸಮತಯಾಚನೆ ವೇಳೆ ಬಿಜೆಪಿ ಕಲಾಪ ಬಹಿಷ್ಕರಿಸಲು ಚಿಂತನೆ ಮಾಡಿದ್ದು, ಇಂದು ಕಮಲ ನಾಯಕರು ನಿರ್ಧಾರ ಕೈಗೊಳ್ಳಲಿದ್ದಾರೆ.

ಬಿಜೆಪಿ ನಾಯಕರು ಇಂದು ಸಂಜೆ ಖಾಸಗಿ ಹೋಟೆಲ್ ನಲ್ಲಿ ಬಿಜೆಪಿ ಶಾಸಕಾಂಗ ಪಕ್ಷದ ಸಭೆ ನಡೆಸಿ ನಿರ್ಧಾರವನ್ನು ಪ್ರಕಟಿಸಲಿದ್ದಾರೆ. ಬುಧವಾರ ಕೂಡ ಬಿಜೆಪಿ ಕುಮಾರಸ್ವಾಮಿ ಪ್ರಮಾಣ ವಚನ ಖಂಡಿಸಿ ಕರಾಳ ದಿನವನ್ನು ಆಚರಿಸಿತ್ತು.

ಸುರೇಶ್ ಕುಮಾರ್ ಅವರನ್ನು ಬಿಜೆಪಿ ಸ್ಪೀಕರ್ ಅಭ್ಯರ್ಥಿಯನ್ನಾಗಿ ಕಣಕ್ಕೆ ಇಳಿಸಿದೆ. ಶುಕ್ರವಾರ ಸ್ಪೀಕರ್ ಚುನಾವಣೆ ನಡೆದ ಬಳಿಕ ಬಿಜೆಪಿ ಕಲಾಪವನ್ನು ಬಹಿಷ್ಕರಿಸುವ ಸಾಧ್ಯತೆಯಿದೆ.

Share This Article
Leave a Comment

Leave a Reply

Your email address will not be published. Required fields are marked *