ಗೃಹ ಸಚಿವರ ಮನೆಮುಂದೆ ಬಿಜೆಪಿ ಪ್ರತಿಭಟನೆಗೆ ಕರೆ – ಪರಮೇಶ್ವರ್ ಮನೆಗೆ ಪೊಲೀಸ್ ಭದ್ರತೆ

By
1 Min Read

ತುಮಕೂರು: ಗೃಹ ಸಚಿವರ ಮನೆಮುಂದೆ ಬಿಜೆಪಿ (BJP) ಪ್ರತಿಭಟನೆಗೆ ಕರೆ ನೀಡಿರುವ ಹಿನ್ನೆಲೆ ಡಾ.ಜಿ. ಪರಮೇಶ್ವರ್ (G Parameshwar) ಮನೆಗೆ ಬಿಗಿ ಪೊಲೀಸ್ ಭದ್ರತೆ ನೀಡಲಾಗಿದೆ.

ಹಸುಗಳ ಕೆಚ್ಚಲು ಕೊಯ್ದು ವಿಕೃತಿ ಮೆರೆದ ಹಿನ್ನೆಲೆ ತುಮಕೂರಿನ (Tumakuru) ಹೆಗ್ಗೆರೆ ಬಳಿಯ ಸಿದ್ದಾರ್ಥ ನಗರದಲ್ಲಿರುವ ಪರಮೇಶ್ವರ್ ಮನೆಮುಂದೆ ಬೆಳಗ್ಗೆ 10:30ಕ್ಕೆ ಪ್ರತಿಭಟನೆ ನಡೆಸಲು ಜಿಲ್ಲಾ ಬಿಜೆಪಿ ಘಟಕ ಕರೆ ನೀಡಿದೆ. ಪ್ರತಿಭಟನೆ ಹಿನ್ನೆಲೆ ಯಾವುದೇ ಅಹಿತಕರ ಘಟನೆ ನಡೆಯದಂತೆ ಪೊಲೀಸ್ ಭದ್ರತೆ ಒದಗಿಸಲಾಗಿದೆ. ಇದನ್ನೂ ಓದಿ: ಮೊಣಕಾಲಿನಲ್ಲೇ ತಿರುಪತಿ ದೇವಾಲಯದ ಮೆಟ್ಟಿಲು ಹತ್ತಿ ಹರಕೆ ತೀರಿಸಿದ ಯುವ ಕ್ರಿಕೆಟಿಗ

ಒಬ್ಬರು ಎಎಸ್‌ಪಿ, ಇಬ್ಬರು ಡಿವೈಎಸ್‌ಪಿ, ನೇತೃತ್ವದಲ್ಲಿ ಭದ್ರತೆ ನೀಡಿದ್ದು, ಸುಮಾರು ನೂರೈವತ್ತಕ್ಕೂ ಹೆಚ್ಚು ಪೊಲೀಸರನ್ನು ನಿಯೋಜಿಸಲಾಗಿದೆ. ಇದನ್ನೂ ಓದಿ: ತಿರುಪತಿ ತಿಮ್ಮಪ್ಪನ ಚಿನ್ನ ಕದ್ದು ಪೊಲೀಸರಿಗೆ ಸಿಕ್ಕಿಬಿದ್ದ ಟಿಟಿಡಿ ನೌಕರ

Share This Article