ಓಟ್ ಕಡಿಮೆ ಬಂದಿದ್ದಕ್ಕೆ ಕುಡಿಯುವ ನೀರಿಗೆ ಬ್ರೇಕ್- ಸತೀಶ್ ಜಾರಕಿಹೊಳಿ ವಿರುದ್ಧ ಬಿಜೆಪಿ ಅಭ್ಯರ್ಥಿ ಆರೋಪ

Public TV
1 Min Read

ಬೆಳಗಾವಿ: ಜಿಲ್ಲೆಯ ಹುಕ್ಕೇರಿ ತಾಲೂಕಿನ ಯಮಕನಮರಡಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಮಾರುತಿ ಅಷ್ಟಗಿ ಅವರು ಶಾಸಕ ಸತೀಶ್ ಜಾರಕಿಹೊಳಿಯಿಂದ ಸೇಡಿನ ರಾಜಕಾರಣ ನಡೆಯುತ್ತಿದೆ ಎಂದು ಆರೋಪಿದ್ದಾರೆ.

ಈ ಕುರಿತು ಅಷ್ಟಗಿ ತಮ್ಮ ಫೆಸ್ ಬುಕ್ ನಲ್ಲಿ ಬರೆದುಕೊಂಡಿದ್ದಾರೆ. `ಚನಾವಣೆಯಲ್ಲಿ ಓಟ್ ಕೆಡಿಮೆ ಬಂದಿದ್ದಕ್ಕೆ ಕುಡಿಯುವ ನೀರಿಗೆ ಬ್ರೇಕ್ ಹಾಕಿದ್ದಾರೆ. ಅಲ್ಲದೇ ಕೊಳವೆ ಬಾವಿಯ ವಿದ್ಯುತ್ ಸಂಪರ್ಕವನ್ನು ಕೂಡ ಕಟ್ ಮಾಡಿದ್ದಾರೆ ಅಂತ ಹೇಳಿದ್ದಾರೆ.

ಇದರಿಂದ ಮನಗುತ್ತಿ, ಹಂದಿಗನೂರು ಗ್ರಾಮದ ಜನರಿಗೆ ಕುಡಿಯುವ ನೀರಿಗೆ ತೊಂದರೆ ಆಗುತ್ತಿದ್ದು. ಕಳೆದ 15 ದಿನಗಳಿಂದ ಕುಡಿಯುವ ನೀರಿಲ್ಲದೆ ಬೆಳಗಾವಿ ಜೆಲ್ಲೆಯ ಹುಕ್ಕೇರಿ ತಾಲೂಕಿನ ಯಮಕನಮರಡಿ ಕ್ಷೇತ್ರದ ಜನರು ಪರಿತಪಿಸುತ್ತಿದ್ದಾರೆಂದು ಈ ಮೂಲಕ ತಮ್ಮ ಅಸಮಾಧಾನ ಹೊರಹಾಕಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *