ಶೃಂಗೇರಿ | ಅಂಚೆ ಮತಗಳ ಮರು ಎಣಿಕೆಯಲ್ಲಿ ಬಿಜೆಪಿ ಮೇಲುಗೈ – ಶಾರದಾಂಬೆ ದರ್ಶನ ಪಡೆದ ಅಭ್ಯರ್ಥಿ ಜೀವರಾಜ್

1 Min Read

ಚಿಕ್ಕಮಗಳೂರು: ಶೃಂಗೇರಿಯ (Sringeri) ಅಂಚೆ ಮತಗಳ ಮರು ಎಣಿಕೆಯಲ್ಲಿ ಬಿಜೆಪಿ ಅಭ್ಯರ್ಥಿ ಡಿ.ಎನ್. ಜೀವರಾಜ್ ಅವರು ಮುನ್ನಡೆ ಸಾಧಿಸಿರುವ ಹಿನ್ನಲೆ ಶೃಂಗೇರಿಯ ಶಾರದಾ ಮಠಕ್ಕೆ ಭೇಟಿ ನೀಡಿ ಶಾರದಾಂಬೆಯ ದರ್ಶನ ಪಡೆದರು.

ನಿನ್ನೆ ನಡೆದ ಅಂಚೆ ಮತಗಳ ಮರು ಎಣಿಕೆಯಲ್ಲಿ 52 ಮತಗಳಿಂದ ಬಿಜೆಪಿ ಅಭ್ಯರ್ಥಿ ಜೀವರಾಜ್ ಮೇಲುಗೈ ಸಾಧಿಸಿದ್ದಾರೆ. ಈ ಬೆನ್ನಲ್ಲೇ ಶೃಂಗೇರಿಗೆ ಭೇಟಿ ನೀಡಿದ್ದ ಜೀವರಾಜ್ ಅವರಿಗೆ ದೇವಸ್ಥಾನದ ಸಮೀಪವೇ ಕಾರ್ಯಕರ್ತರು ಅಭಿನಂದಿಸಿದರು. ಇದನ್ನೂ ಓದಿ: ಶೃಂಗೇರಿ ಕ್ಷೇತ್ರದ ಅಂಚೆ ಮತ ಮರು ಎಣಿಕೆಯಲ್ಲಿ ಟ್ವಿಸ್ಟ್ – ಬಿಜೆಪಿ ಅಭ್ಯರ್ಥಿ ಜೀವರಾಜ್‌ಗೆ ಬಹುಮತ

ಮತಗಳ ಮರುಎಣಿಕೆ ಈಗಾಗಲೇ ಪೂರ್ಣಗೊಂಡಿದ್ದು ಚುನಾವಣಾ ಅಧಿಕಾರಿಗಳಿಂದ ಫಲಿತಾಂಶ ಅಧಿಕೃತ ಘೋಷಣೆಯೊಂದೇ ಬಾಕಿ ಇದೆ. ಮತ ಎಣಿಕೆಯ ಫಲಿತಾಂಶವನ್ನು ಕೋರ್ಟ್ ರವಾನೆ ಮಾಡಲಾಗಿದೆ. ಇದನ್ನೂ ಓದಿ: ಶೃಂಗೇರಿ | ಮರು ಎಣಿಕೆಯಲ್ಲೂ ಕಾಂಗ್ರೆಸ್‌ ಅಭ್ಯರ್ಥಿಗೆ ಜಯ – ಲೀಡ್‌ ಹೆಚ್ಚಿಸಿಕೊಂಡ ರಾಜೇಗೌಡ

ಈ ಕುರಿತು ಚುನಾವಣಾ ಅಧಿಕಾರಿ ಮಾತನಾಡಿ, ಹೈಕೋರ್ಟ್ ಸೂಚನೆಯಂತೆ ಅಂಚೆ ಮತಗಳ ಮರು ಎಣಿಕೆ ಪೂರ್ಣವಾಗಿದೆ. ಮರು ಎಣಿಕೆಯನ್ನು ಅಂಚೆ ಮತಗಳದ್ದಷ್ಟೇ ಮಾಡಲಾಗಿದೆ. 1822 ಅಂಚೆ ಮತಗಳನ್ನ ಮರು ಪರಿಶೀಲನೆ, ಎಣಿಕೆ ಮಾಡಲಾಗಿದೆ ಎಂದು ತಿಳಿಸಿದ್ದಾರೆ.

2023ರ ಎಣಿಕೆಯಲ್ಲಿ ಬಿಜೆಪಿ ಅಭ್ಯರ್ಥಿ ಜೀವರಾಜ್‌ಗೆ 692 ಮತ, ಕಾಂಗ್ರೆಸ್ ಅಭ್ಯರ್ಥಿ ರಾಜೇಗೌಡ 569 ಮತ ಬಿದ್ದಿತ್ತು. 2026ರ ಮರು ಎಣಿಕೆಯಲ್ಲಿ ಜೀವರಾಜ್ 690 ಮತ (2 ಮತ ಕಡಿಮೆ) ರಾಜೇಗೌಡ 314 ಮತ (251 ಮತ ಕಡಿಮೆ) ಪಡೆದಿದ್ದಾರೆ. ರಾಜೇಗೌಡರಿಗೆ ಬಿದ್ದ 318 ಮತಗಳು ಮರು ಎಣಿಕೆಯಲ್ಲಿ ಅಸಿಂಧು ಎಂದು ಘೋಷಿಸಲಾಗಿದೆ. ಎಲ್ಲಾ ವರದಿಗಳನ್ನು ಚುನಾವಣಾ ಆಯೋಗ ಮತ್ತು ಹೈಕೋರ್ಟ್ಗೆ ಸಲ್ಲಿಕೆ ಮಾಡಲಾಗಿದೆ. ಮತ ಟ್ಯಾಂಪರಿAಗ್ ಬಗ್ಗೆ ಪ್ರತಿಕ್ರಿಯೆ ನೀಡಲು ನನಗೆ ಅಧಿಕಾರ ಇಲ್ಲ. ಚುನಾವಣಾಧಿಕಾರಿ ಗೌರವ್ ಕುಮಾರ್ ಶೆಟ್ಟಿ ಹೇಳಿಕೆ ನೀಡಿದ್ದಾರೆ.

Share This Article