ನಮ್ಮ ಕಾರ್ಯಕರ್ತರನ್ನ ಮುಟ್ಟಿದ್ರೆ ಪರಿಸ್ಥಿತಿ ನೆಟ್ಟಗಿರಲ್ಲ – ಹಾಲಿ ಶಾಸಕರ ವಿರುದ್ಧ ತೊಡೆ ತಟ್ಟಿದ ಮಾಜಿ ಸಚಿವ

Public TV
1 Min Read

ಬೆಂಗಳೂರು: ವಿಧಾನಸಭಾ ಚುನಾವಣೆಯಲ್ಲಿ ಸೋತಿರೋ ಬಿಜೆಪಿ ಅಭ್ಯರ್ಥಿ ಕಾರ್ಯಕರ್ತರ ಮಧ್ಯೆ ಭರ್ಜರಿ ಭಾಷಣ ಮಾಡಿ ತೊಡೆ ತಟ್ಟಿದ್ದಾರೆ. ತಮ್ಮ ಪಕ್ಷದ ಕಾರ್ಯಕರ್ತರನ್ನು ವಿನಃ ಕಾರಣ ಮುಟ್ಟಿದರೆ ಪರಿಸ್ಥಿತಿ ನೆಟ್ಟಗಿರುವುದಿಲ್ಲ ಎಂದು ಹಾಲಿ ಶಾಸಕರ ವಿರುದ್ಧ ತೊಡೆತಟ್ಟಿದ ಪ್ರಸಂಗ ಬೆಂಗಳೂರು ಹೊರವಲಯ ಆನೇಕಲ್ ತಾಲೂಕಿನಲ್ಲಿ ನಡೆದಿದೆ.

ಆನೇಕಲ್ ನಲ್ಲಿ ಏರ್ಪಡಿಸಲಾಗಿದ್ದ ಬಿಜೆಪಿ ಕಾರ್ಯಕರ್ತರು ಹಾಗೂ ಮತದಾರರಿಗೆ ಅಭಿನಂದನಾ ಸಮಾರಂಭದಲ್ಲಿ ಭಾಗವಹಿಸಿದ ಮಾಜಿ ಸಚಿವ ನಾರಾಯಣ ಸ್ವಾಮಿ ಹಾಲಿ ಕಾಂಗ್ರೆಸ್ ಶಾಸಕ ಬಿ ಶಿವಣ್ಣ ವಿರುದ್ಧ ವಾಗ್ದಾಳಿ ನಡೆಸಿ ಎಚ್ಚರಿಕೆ ನೀಡಿದ್ದಾರೆ.

ಬಿಜೆಪಿ ಕ್ಷೇತ್ರದಲ್ಲಿ ಸೋತಿರಬಹುದು, ಆದರೆ ಕಾರ್ಯಕರ್ತರೊಂದಿಗೆ ತಾವು ಮುಂದೆಯೂ ಇರುತ್ತೇವೆ. ಈಗಾಗಲೇ ಕೆಲವು ಕಾಂಗ್ರೆಸ್ ಕಾರ್ಯಕರ್ತರು ಬಿಜೆಪಿ ಕಾರ್ಯಕರ್ತರ ಮೇಲೆ ಹಲ್ಲೆ ನಡೆಸಲು ಸಿದ್ಧತೆ ನಡೆಸುತ್ತಿದ್ದಾರೆ ಎಂದು ಮಾಹಿತಿ ಇದೆ. ಒಂದು ವೇಳೆ ಹಾಗೇನಾದರೂ ನಮ್ಮ ಕಾರ್ಯಕರ್ತರನ್ನು ಮುಟ್ಟಿದರೆ ಪರಿಸ್ಥಿತಿ ನೆಟ್ಟಗಿರುವುದಲ್ಲ ಎಂದು ಸಮಾರಂಭದಲ್ಲಿ ಬಹಿರಂಗವಾಗಿ ತೊಡೆತಟ್ಟಿ ಸವಾಲೆಸದರು.

ಇದೇ ವೇಳೆ ಸಂದರ್ಭದಲ್ಲಿ ಬಿಜೆಪಿ ಕಾರ್ಯಕರ್ತ ಎಂದು ಹೇಳಿಕೊಂಡು ಪಕ್ಷದ ಬೆನ್ನಿಗೆ ಹಿಂದಿನಿಂದ ಚೂರಿ ಹಾಕುವವರು ಒಬ್ಬ ಅಪ್ಪನಿಗೆ ಹುಟ್ಟಿದ್ದರೆ, ಮುಂದೆ ಬಂದು ಮಾತನಾಡಿ ಎಂದು ಪಕ್ಷ ವಿರೋದಿಗಳಿಗೆ ಸಮಾರಂಭದಲ್ಲಿ ಬಹಿರಂಗವಾಗಿ ಸವಾಲು ಹಾಕಿದ್ರು.

Share This Article
Leave a Comment

Leave a Reply

Your email address will not be published. Required fields are marked *