ಬಿಜೆಪಿ ಒಂದು ಏಕೈಕ ದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ- ಅನಂತ್ ಕುಮಾರ್

Public TV
1 Min Read

ಬೆಂಗಳೂರು: ರಾಜ್ಯ ವಿಧಾನಸಭಾ ಚುನಾವಣಾ ಫಲಿತಾಂಶ ಬಹುತೇಕವಾಗಿ ಹೊರಬಿದ್ದಿದ್ದು, ಬಿಜೆಪಿ ಒಂದು ಏಕೈಕ ದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ ಅಂತ ಕೇಂದ್ರ ಸಚಿವ ಅನಂತ್ ಕುಮಾರ್ ಹೇಳಿದ್ದಾರೆ.

ಸುದ್ದಿಗಾರ ಜೊತೆ ಮಾತನಾಡಿದ ಅವರು, ಕಾಂಗ್ರೆಸ್ಸನ್ನು ಸಂಪೂರ್ಣವಾಗಿ ತಿರಸ್ಕಾರ ಮಾಡಿದ್ದಾರೆ. ಸಿದ್ದರಾಮಯ್ಯನವರು ಚಾಮುಂಡೇಶ್ವರಿಯಲ್ಲಿ ಹೀನಾಯವಾಗಿ ಸೋತಿದ್ದಾರೆ. ಅಂದ್ರೆ ಕಾಂಗ್ರೆಸ್ ಮುಕ್ತ ಕರ್ನಾಟಕ ಅನ್ನೋದು ಮೋದಿಯವರ ಉಚ್ಛಾರ, ಅಮಿತ್ ಶಾ ಅವರ ಒಂದು ಮುಂದಾಳತನ ಹಾಗೂ ಯಡಿಯೂರಪ್ಪನವರ ನೇತೃತ್ವದಲ್ಲಿ ಕರ್ನಾಟಕದ ಜನ ಸಂಪೂರ್ಣವಾಗಿ ಆಶೀರ್ವಾದ ಮಾಡಿದ್ದಾರೆ ಅಂದ್ರು.

ಜನ ಕಾಂಗ್ರೆಸ್ಸನ್ನು ಸಂಪೂರ್ಣವಾಗಿ ತಿರಸ್ಕರಿಸಿದ್ದಾರೆ. ಭಾರತೀಯ ಜನತಾ ಪಾರ್ಟಿ ಒಂದು ಏಕೈಕ ದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ. ಜೆಡಿಎಸ್ ಕೂಡ ಗಣನೀಯವಾಗಿ ಗೆದ್ದಿದೆ. ಆದ್ರೆ ಕಾಂಗ್ರೆಸ್ ವಿರೋಧಿ ಮತ ಇಂದು ಜನ ಕೊಟ್ಟಿರುವುದರಿಂದ ಇಲ್ಲಿ ಮುಂದಿನ ಹೆಜ್ಜೆ ಏನಾಗಬೇಕು ಅಂತ ನಾವು ನಮ್ಮ ಕೇಂದ್ರೀಯ ನಾಯಕರುಗಳ ಜೊತೆಯಲ್ಲಿ ಚರ್ಚೆ ಮಾಡಿ ತಿಳಿಸುತ್ತೇವೆ ಅಂತ ಹೇಳಿದ್ರು.

Share This Article
Leave a Comment

Leave a Reply

Your email address will not be published. Required fields are marked *