ರಾಜಕೀಯ ಸ್ವಾರ್ಥಕ್ಕಾಗಿ ಬಿಜೆಪಿ ಹಿಂದುತ್ವ ಬಳಕೆ ಮಾಡ್ತಿದೆ: ಪ್ರಮೋದ್ ಮುತಾಲಿಕ್

Public TV
1 Min Read

ಚಿಕ್ಕಮಗಳೂರು: ಬಿಜೆಪಿ ತನ್ನ ರಾಜಕೀಯ ಸ್ವಾರ್ಥಕ್ಕಾಗಿ ಹಿಂದುತ್ವವನ್ನು ಬಳಕೆ ಮಾಡುತ್ತಿದೆ. ಗೋರಕ್ಷಣೆ ಬಗ್ಗೆ ಮಾತನಾಡುವ ನೈತಿಕತೆ ಬಿಜೆಪಿಗೆ ಇಲ್ಲ ಅಂತ ಶ್ರೀರಾಮಸೇನೆಯ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ವಾಗ್ದಾಳಿ ನಡೆಸಿದ್ದಾರೆ.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಬಾರಿಯ ವಿಧಾನಸಭಾ ಚುನಾವಣೆಗೆ ಶಿವಸೇನೆ ಜೊತೆ ಶ್ರೀರಾಮಸೇನೆ ಕಣಕ್ಕಿಳಿಯಲಿದೆ. ಒಟ್ಟು 60 ಕ್ಷೇತ್ರಗಳಲ್ಲಿ ಚುನಾವಣೆಗೆ ಸ್ಪರ್ಧೆ ಮಾಡಲಿದ್ದೇವೆ. ನಾನು ಶೃಂಗೇರಿ ಅಥವಾ ತೇರದಾಳ ಕ್ಷೇತ್ರದಿಂದ ಸ್ಪರ್ಧಿಸಲು ಇಚ್ಛಿಸಿದ್ದೇನೆ. ಇನ್ನೆರಡು ದಿನಗಳಲ್ಲಿ ಅಂತಿಮವಾಗುವ ಸಾಧ್ಯತೆಗಳಿವೆ ಅಂತ ಅಂದ್ರು.

ಇತ್ತ ಜೇವರ್ಗಿ ಕ್ಷೇತ್ರದಿಂದ ಸಿದ್ದಲಿಂಗಸ್ವಾಮೀಜಿ ಸ್ಪರ್ಧೆ ಮಾಡ್ತಿದ್ದಾರೆ. ಈಗಾಗಲೇ ಆಕಾಂಕ್ಷಿಗಳ ಪಟ್ಟಿಯನ್ನು ಮುಂಬೈಗೆ ಕಳುಹಿಸಲಾಗಿದೆ. ಕೇಂದ್ರದಲ್ಲಿ ಬಿಜೆಪಿ ಸರ್ಕಾರವಿದ್ರೂ, ಗೋ ಮಾಂಸ ರಫ್ತು ಮಾಡುವ ನಂ.1 ದೇಶವಾಗಿದೆ. ಬಿಜೆಪಿಗೆ ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಶಿವಸೇನೆ ಬೆಂಬಲ ನೀಡುವುದಿಲ್ಲ. ಕಾರಣ ಶಿವಸೇನೆಯದ್ದು ಕೂಡ ಹಿಂದುತ್ವ ಪ್ರಮುಖ ಅಜೆಂಡವಾಗಿದೆ ಎಂದು ಮುತಾಲಿಕ್ ಹೇಳಿದ್ರು.

Share This Article
Leave a Comment

Leave a Reply

Your email address will not be published. Required fields are marked *