5.21 ಲಕ್ಷ ಮನೆ ಉದ್ಘಾಟನೆ, ಬಡವರ ಸಬಲೀಕರಣಕ್ಕಾಗಿ ಬಿಜೆಪಿ ಕೆಲಸ: ಮೋದಿ

Public TV
1 Min Read

ನವದೆಹಲಿ: ಕೇಂದ್ರದ ಬಿಜೆಪಿ ಸರ್ಕಾರವಿರಲಿ, ರಾಜ್ಯಗಳಲ್ಲಿ ಬಿಜೆಪಿ ಸರ್ಕಾರವಿರಲಿ, ಪಕ್ಷವು ‘ಸಬ್ಕಾ ಸಾಥ್ ಸಬ್ಕಾ ವಿಕಾಸ್’ ಎಂಬ ಮಂತ್ರದೊಂದಿಗೆ ನಡೆದುಕೊಳ್ಳುತ್ತಿದೆ. ಎಲ್ಲರೂ ಬಡವರ ಸಬಲೀಕರಣಕ್ಕಾಗಿ ಶ್ರಮಿಸುತ್ತಿದ್ದಾರೆ ಎಂದು ಪ್ರಧಾನಿ ಮೋದಿ ಹೇಳಿದರು.

ಗ್ರಹ ಪ್ರವೇಶ ಕಾರ್ಯಕ್ರಮದ ಅಡಿಯಲ್ಲಿ ಮಧ್ಯಪ್ರದೇಶದಲ್ಲಿ ಪ್ರಧಾನ ಮಂತ್ರಿ ಆವಾಸ್ ಯೋಜನೆಯ ಫಲಾನುಭವಿಗಳಿಗಾಗಿ ನಿರ್ಮಾಣವಾಗಿದ್ದ 5.21 ಲಕ್ಷ ಮನೆಗಳನ್ನು ಪ್ರಧಾನಿ ನರೇಂದ್ರ ಮೋದಿ ಉದ್ಘಾಟಿಸಿದರು. ವೀಡಿಯೋ ಕಾನ್ಫರೆನ್ಸ್ ಮೂಲಕ ಮೋದಿ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಕೂಡ ಉಪಸ್ಥಿತರಿದ್ದರು. ಇದನ್ನೂ ಓದಿ: ಪರವಾನಿಗೆ ಇಲ್ಲದೆ ಬಂದೂಕುಗಳನ್ನು ಹೊಂದಲು ಕೊಡವರಿಗೆ ಅವಕಾಶ- ರಾಜ್ಯಕ್ಕೆ ಸುಪ್ರೀಂ ನೋಟಿಸ್‌

ಕೆಲವು ರಾಜಕೀಯ ಪಕ್ಷಗಳು ಬಡತನವನ್ನು ತೊಡೆದುಹಾಕಲು ಸಾಕಷ್ಟು ಘೋಷಣೆಗಳನ್ನು ಎತ್ತಿದವು. ಆದರೆ ಬಡವರ ಸಬಲೀಕರಣಕ್ಕಾಗಿ ಸಾಕಷ್ಟು ಮಾಡಲಾಗಿಲ್ಲ. ಬಡವರು ಸಬಲೀಕರಣಗೊಂಡಾಗ ಬಡತನದ ವಿರುದ್ಧ ಹೋರಾಡುವ ಧೈರ್ಯವನ್ನು ನೀಡುತ್ತದೆ ಅಂತ ನಾನು ನಂಬುತ್ತೇನೆ. ಪ್ರಾಮಾಣಿಕ ಸರ್ಕಾರದ ಪ್ರಯತ್ನಗಳು ಸಶಕ್ತ ಬಡವರ ಜೊತೆ ಸೇರಿಕೊಂಡಾಗ, ಬಡತನ ನಿರ್ಮೂಲನೆ ಆಗುತ್ತದೆ ಎಂದು ಹೇಳಿದರು.

ಹಿಂದಿನ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ ಅವರು, ಕಳೆದ ಸರ್ಕಾರ ನನಗಿಂತ ಹಿಂದಿನ ಸರ್ಕಾರ ತಮ್ಮ ಅಧಿಕಾರಾವಧಿಯಲ್ಲಿ ಬಡವರಿಗೆ ಕೆಲವೇ ಲಕ್ಷ ಮನೆಗಳನ್ನು ನಿರ್ಮಿಸಿದೆ. ನಮ್ಮ ಸರ್ಕಾರ ಬಡವರಿಗೆ ಸುಮಾರು 2.5 ಕೋಟಿ ಮನೆಗಳನ್ನು ನೀಡಿದೆ. ಇವುಗಳಲ್ಲಿ 2 ಕೋಟಿ ಮನೆಗಳನ್ನು ಹಳ್ಳಿಗಳಲ್ಲಿ ನಿರ್ಮಿಸಲಾಗಿದೆ. ಎರಡು ವರ್ಷಗಳು, ಕೊರೊನಾವೈರಸ್‍ನಿಂದಾಗಿ ಅಡೆತಡೆಗಳ ಹೊರತಾಗಿಯೂ, ಕೆಲಸವು ನಿಧಾನವಾಗಲಿಲ್ಲ ಎಂದರು. ಇದನ್ನೂ ಓದಿ: ಭೂಮಾಫಿಯಾಗೆ ಆರ್.ಅಶೋಕ್ ರಕ್ಷಣೆ: ಆಪ್ ಆರೋಪ

ಅನೇಕ ಮಹಿಳೆಯರಿಗೆ ಮನೆಗಳ ಮಾಲೀಕತ್ವದ ಹಕ್ಕು ನೀಡಲಾಗಿದೆ. ಪ್ರಧಾನ ಮಂತ್ರಿ ಆವಾಸ್ ಯೋಜನೆ ಅಡಿಯಲ್ಲಿ ನಿರ್ಮಿಸಲಾದ ಸುಮಾರು 2 ಕೋಟಿ ಮನೆಗಳ ಮಾಲೀಕತ್ವದ ಹಕ್ಕುಗಳನ್ನು ಮಹಿಳೆಯರೂ ಹೊಂದಿದ್ದಾರೆ. ಈ ಹಕ್ಕು ಮನೆಯಲ್ಲಿ ಇತರ ಹಣಕಾಸಿನ ನಿರ್ಧಾರಗಳನ್ನು ತೆಗೆದುಕೊಳ್ಳುವಲ್ಲಿ ಮಹಿಳೆಯರ ಭಾಗವಹಿಸುವಿಕೆಯನ್ನು ಬಲಪಡಿಸಿದೆ. ಇದು ಪ್ರಪಂಚದಾದ್ಯಂತದ ದೊಡ್ಡ ವಿಶ್ವವಿದ್ಯಾಲಯಗಳಲ್ಲಿ ಅಧ್ಯಯನದ ವಿಷಯವಾಗಿದೆ ಎಂದು ನುಡಿದರು.

Share This Article
Leave a Comment

Leave a Reply

Your email address will not be published. Required fields are marked *