ಸಿದ್ದರಾಮಯ್ಯನವರೇ, ನಿಮ್ಮದು ಹಗಲುವೇಷವೋ, ಛದ್ಮ ವೇಷವೋ?: ಬಿಜೆಪಿ ವಾಗ್ದಾಳಿ

Public TV
1 Min Read

ಬೆಂಗಳೂರು: ಸಿದ್ದರಾಮಯ್ಯನವರೇ, ನಿಮ್ಮದು ಹಗಲುವೇಷವೋ, ಛದ್ಮ ವೇಷವೋ ಎಂದು ಪ್ರಶ್ನಿಸಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಬಿಜೆಪಿ ಟ್ವಿಟ್ಟರ್‍ ನಲ್ಲಿ ಸರಣಿ ಟ್ವೀಟ್ ದಾಳಿ ಮುಂದುವರೆಸಿ, ವಾಗ್ದಾಳಿ ನಡೆಸಿದೆ.  ಇದನ್ನೂ ಓದಿ:  ಬಿಟ್‌ಕಾಯಿನ್‌ ಹಗರಣದಲ್ಲಿ ಸಿಎಂ ತಲೆದಂಡ ಪಡೆಯಲಿದೆ: ಪ್ರಿಯಾಂಕ್ ಖರ್ಗೆ

ಟ್ವೀಟ್‍ನಲ್ಲಿ ಏನಿದೆ?
ಸಿದ್ದರಾಮಯ್ಯನವರೇ, ನಿಮ್ಮದು ಹಗಲುವೇಷವೋ, ಛದ್ಮ ವೇಷವೋ? ತಲೆಗೆ ಟೋಪಿ ಹಾಕಿದಾಗ ಅಲ್ಪಸಂಖ್ಯಾತ. ಕಂಬಳಿ ಹೊದ್ದುಕೊಂಡರೆ ಒಂದು ಜಾತಿ. ಚುನಾವಣೆ ಬಂದಾಗ ನಾನೂ ಹಿಂದೂ. ಮುಖ್ಯಮಂತ್ರಿಯಾಗುವ ಆಸೆ ಬಂದಾಗ ದಲಿತ. ಅಧಿಕಾರಕ್ಕಾಗಿ ಎಷ್ಟೊಂದು ವೇಷ, ನಾಟಕ. ಇದನ್ನೂ ಓದಿ: ಬಿಟ್ ಕಾಯಿನ್ ಎಂದರೇನು? ನಮ್ಮಂತವರಿಗೆ ಸಿದ್ದರಾಮಯ್ಯನವರು ವಿವರಿಸಲಿ: ಪ್ರತಾಪ್ ಸಿಂಹ

ಸಿದ್ದರಾಮಯ್ಯ ಜೆಡಿಎಸ್ ಕಟ್ಟಿದರಾ? ಇಲ್ಲ, ಪಕ್ಷಾಂತರ ಮಾಡಿದರು. ಸಿದ್ದರಾಮಯ್ಯ ಕಾಂಗ್ರೆಸ್ ಕಟ್ಟಿದರಾ? ಇಲ್ಲ, ದಲಿತ ನಾಯಕರನ್ನು ತುಳಿದರು. ಸಿದ್ದರಾಮಯ್ಯ ರಾಜ್ಯ ಕಟ್ಟಿದರಾ? ಇಲ್ಲ, ಧರ್ಮ ವಿಭಜನೆ ಮಾಡಿದರು ಎಂದು ಸರಣಿ ಟ್ವೀಟ್ ಮೂಲಕ ಬಿಜೆಪಿ ಕಿಡಿಕಾರಿದೆ. ಇದನ್ನೂ ಓದಿ: ಬೊಮ್ಮಾಯಿ ಮಾತಾಡೋದು ನೋಡಿದ್ರೆ ಅನುಮಾನ ಬರ್ತಿದೆ: ಸಿದ್ದರಾಮಯ್ಯ 

Share This Article
Leave a Comment

Leave a Reply

Your email address will not be published. Required fields are marked *