ಬಿಜೆಪಿ ಮುಖಂಡನ ಹತ್ಯೆಗೆ ಅಸಲಿ ಕಾರಣ ಬಿಚ್ಚಿಟ್ಟ ಆರೋಪಿ

Public TV
1 Min Read

– ಆರೋಪಿ ಅಕ್ಕನ ಬಗ್ಗೆ ಬಳಸಿದ ಪದವೇ ಕೊಲೆಗೆ ಕಾರಣ

ಮೈಸೂರು: ಮೈಸೂರಿನಲ್ಲಿ ಮಾರ್ಚ್ 6 ರಂದು ಹುಟ್ಟುಹಬ್ಬದ ಪಾರ್ಟಿಯಲ್ಲೇ ನಡೆದಿದ್ದ ಬಿಜೆಪಿ ಮುಖಂಡ ಆನಂದ್ ಬರ್ಬರ ಹತ್ಯೆಗೆ ಅಸಲಿ ಕಾರಣ ಈಗ ಸ್ಪಷ್ಟವಾಗಿದೆ.

ಆನಂದ್ ಕೊಲೆ ಮಾಡಿ ಪೊಲೀಸರಿಗೆ ಶರಣಾದ ಆರೋಪಿ ಬಸವರಾಜ್ ಕೊಲೆಗೆ ಕಾರಣ ಬಿಚ್ಚಿಟ್ಟಿದ್ದಾನೆ. ಆರೋಪಿ ಬಸವರಾಜ್ ನ ಅಕ್ಕನ ಬಗ್ಗೆ ಕೊಲೆಯಾದ ಆನಂದ್ ಕೆಟ್ಟದಾಗಿ ಮಾತನಾಡಿದ್ದೇ ಆತನ ಕೊಲೆಗೆ ಕಾರಣವಾಗಿದೆ. ಆರೋಪಿ ಬಸವರಾಜ್, ರಾ ಎಣ್ಣೆ ಕುಡಿದು ಅದೇ ಬಾಟಲ್‍ನಲ್ಲಿ ಆನಂದ್ ಬುರುಡೆ ಬಿಚ್ಚಿದ್ದಾನೆ ಎಂಬ ಮಾಹಿತಿ ಲಭ್ಯವಾಗಿದೆ.

ಮಾರ್ಚ್ 5ರ ಸಂಜೆ ಬಸವರಾಜ್‍ಗೆ ಕರೆ ಮಾಡಿ ಆನಂದ್ ಪಾರ್ಟಿಗೆ ಕರೆಸಿಕೊಂಡಿದ್ದ. ಮಧ್ಯರಾತ್ರಿಯವರೆಗೆ ಪಾರ್ಟಿ ಮಾಡಿದ್ದರು. ಕುಡಿದಾಗ ಬಾಸ್‍ನಂತೆ ವರ್ತಿಸುತ್ತಿದ್ದ ಬಿಜೆಪಿ ಮುಖಂಡ ಆನಂದ್, ತನ್ನ ಸುತ್ತಮುತ್ತ ಇದ್ದವರನ್ನು ನಿಂದಿಸುತ್ತ ತಾನು ಹೇಳಿದ ಕೆಲಸ ಮಾಡುವಂತೆ ಸೂಚಿಸುತ್ತಿದ್ದ. ಅಲ್ಲದೆ ಈ ಹಿಂದೆಯೂ ಪಾರ್ಟಿ ಕೊಡಿಸಿ ಬಸವರಾಜ್ ಮೇಲೆ ಆನಂದ್ ಹಲ್ಲೆ ಮಾಡಿದ್ದ.

ಈ ಬಾರಿಯೂ ಹುಟ್ಟುಹಬ್ಬದ ದಿನ ಪಾರ್ಟಿಯಲ್ಲಿ ಮಧ್ಯರಾತ್ರಿ ಬಸವರಾಜ್ ಜೊತೆ ಆನಂದ್ ಕುಚೇಷ್ಠೆ ಮಾಡಿ, ಬಸವರಾಜ್ ತಲೆ ಮೇಲೆ ಹೊಡೆದು ಅವರ ಅಕ್ಕನ ಬಗ್ಗೆ ಅವಾಚ್ಯ ಶಬ್ದದಿಂದ ನಿಂದಿಸಿದ್ದಾನೆ. ಆನಂದ್ ಮಾತಿನಿಂದ ಸಿಟ್ಟಿಗೆದ್ದ ಬಸವರಾಜ್ ಅರ್ಧ ಬಾಟೆಲ್ ರಾ ಎಣ್ಣೆಯನ್ನು ಕುಡಿದು, ಅದೇ ಬಾಟಲ್‍ನಿಂದಲೇ ಆನಂದ್ ತಲೆಗೆ ಹೊಡೆದಿದ್ದಾನೆ. ಒಂದೇ ಏಟಿಗೆ ಆನಂದ್ ತಲೆ ಹಾಗೂ ಬಾಟಲ್ ಎರಡು ಓಪನ್ ಆಗಿದೆ. ತೀವ್ರ ರಕ್ತಸ್ರಾವದಿಂದ ಕೆಳಗೆ ಬಿದ್ದಿದ್ದಾನೆ. ಆಗ ಜೇಬಿನಲ್ಲಿದ್ದ ಚಾಕುವಿನಿಂದ ಆನಂದ್‍ಗೆ ಹಿಗ್ಗಾಮುಗ್ಗ ಇರಿದು ಕೊಲೆ ಮಾಡಿದ್ದಾನೆ ಎಂದು ಮೂಲಗಳಿಂದ ತಿಳಿದು ಬಂದಿದೆ.

ಕೊಲೆ ನಂತರ ಅಪಾರ್ಟ್‌ಮೆಂಟ್‌ ನಿಂದ ಮನೆಗೆ ತೆರಳಿ ಹೆಂಡತಿಯನ್ನು ತವರು ಮನೆಗೆ ಬಿಟ್ಟು ಮಾರ್ಚ್ 6ರಂದೆ ಬೆಂಗಳೂರಿಗೆ ತೆರಳಿದ್ದಾನೆ. ನಂತರ ಸ್ನೇಹಿತರ ಸಲಹೆಯಂತೆ ತಾನೇ ಪೊಲೀಸರ ಮುಂದೆ ಬಂದು ಶರಣಾಗಿದ್ದಾನೆ.

Share This Article
Leave a Comment

Leave a Reply

Your email address will not be published. Required fields are marked *