ಬಿಎಸ್‍ವೈ ಟಿಕೆಟ್ ಕೊಡಲ್ಲ, ನನ್ನ ದಾರಿ ನನಗೆ: ರಾಜು ಕಾಗೆ

Public TV
1 Min Read

– ಕಾಂಗ್ರೆಸ್ ನಾಯಕರು ನನ್ನ ಜೊತೆ ಸಂಪರ್ಕದಲ್ಲಿದ್ದಾರೆ

ಬೆಳಗಾವಿ(ಚಿಕ್ಕೋಡಿ): ಕಾಗವಾಡ ಮತ್ತು ಅಥಣಿ ಎರಡು ಮತಕ್ಷೇತ್ರದ ಮೇಲೆ ಕಣ್ಣಿಟ್ಟಿರುವ ಬಿಜೆಪಿಯ ಹಿರಿಯ ಮುಖಂಡ ರಾಜು ಕಾಗೆ ಅವರು ನೇರವಾಗಿಯೇ ಪಕ್ಷದ ವಿರುದ್ಧ ಕಿಡಿಕಾರಿದ್ದಾರೆ.

ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಬಿಜೆಪಿ ನಾಯಕರ ವಿರುದ್ಧ ಬಹಿರಂಗವಾಗಿ ಹರಿಹಾಯ್ದಿದ್ದಾರೆ. ಸಿಎಂ ಯಡಿಯೂರಪ್ಪನವರು ನನಗೆ ಟಿಕೆಟ್ ಕೊಡುವದಿಲ್ಲ ಎಂದು ನೇರವಾಗಿ ಹೇಳಿದ್ದಾರೆ. ಹೀಗಾಗಿ ನನ್ನ ದಾರಿ ನಾನು ನೋಡಿಕೊಳ್ಳುತ್ತೇನೆ ಎಂದು ತಮ್ಮ ನಿರ್ಧಾರವನ್ನು ಸ್ಪಷ್ಟಪಡಿಸಿದರು.

ಹುಬ್ಬಳ್ಳಿಯಲ್ಲಿ ನಡೆದ ಬಿಜೆಪಿ ಸಭೆಯಲ್ಲಿ ಬಿಎಸ್‍ವೈ ನನಗೆ ಬಿಜೆಪಿ ಟಿಕೆಟ್ ಕೊಡಲ್ಲ ಎಂದು ಹೇಳಿದ್ದಾರೆ. ಹೀಗಾಗಿ ಕಾಂಗ್ರೆಸ್ ನಾಯಕರು ನನ್ನ ಜೊತೆಯಲ್ಲಿ ನಿರಂತರ ಸಂಪರ್ಕದಲ್ಲಿದ್ದಾರೆ. ಆದರೆ ಸುಪ್ರೀಂ ಕೋರ್ಟ್ ತೀರ್ಪನ್ನು ಗಮನದಲ್ಲಿಟ್ಟುಕೊಂಡು ನಾನು ಮುಂದುವರಿಯುತ್ತೇನೆ. ಕೋರ್ಟ್ ತೀರ್ಪು ಅನರ್ಹರ ಪರವಾಗಿ ಬಂದರೆ, ನಾನು ಅಥಣಿಗೆ ಹೋಗಿ ಸ್ಪರ್ಧೆ ಮಾಡುತ್ತೇನೆ. ಅವರ ವಿರೋಧವಾಗಿ ಬಂದರೆ ನಾನು ಕಾಗವಾಡದಿಂದಲೇ ಸ್ಪರ್ಧೆ ಮಾಡುತ್ತೇನೆ ಎಂದು ರಾಜು ಕಾಗೆ ತಿಳಿಸಿದರು.

ಡಿಸಿಎಂ ಲಕ್ಷ್ಮಣ ಸವದಿಯವರು ನಿಮಗೆ ಅಥಣಿ ಪ್ರವೇಶಕ್ಕೆ ಅವಕಾಶ ನೀಡ್ತಾರಾ ಎಂಬ ಪ್ರಶ್ನೆಗೆ ಉತ್ತರಿಸಿದ ರಾಜು ಕಾಗೆ, ರಾಜಕಾರಣದಲ್ಲಿ ಸ್ನೇಹಿತ, ಅಣ್ಣ, ತಮ್ಮ, ಮಾವ, ಅಳಿಯ ಯಾವುದು ಲೆಕ್ಕಕ್ಕೆ ಬರೋದಿಲ್ಲ. ನನ್ನ ಸ್ವಂತ ಸಹೋದರನೇ ನನ್ನ ವಿರುದ್ಧ ಒಂದು ಬಾರಿ ಚುಣಾವಣೆಯಲ್ಲಿ ಕೆಲಸ ಮಾಡಿದ್ದನು. ಹೀಗಾಗಿ ರಾಜಕಾರಣದಲ್ಲಿ ಯಾವುದೇ ಸಂಬಂಧ ಲೆಕ್ಕಕ್ಕೆ ಬರೋದಿಲ್ಲ. ಹೀಗಾಗಿ ಶ್ರೀಮಂತ ಪಾಟೀಲ್ ಅನರ್ಹರಾದರೆ ಕಾಗವಾಡದಲ್ಲಿ ಚುನಾವಣೆಗೆ ನಿಲ್ಲುತ್ತೇನೆ ಎಂದರು.

Share This Article
Leave a Comment

Leave a Reply

Your email address will not be published. Required fields are marked *