ನನಗೆ ವೋಟ್ ಹಾಕದಿದ್ದರೆ ಶಾಪ ಹಾಕುವೆ: ಮತದಾರರಿಗೆ ಸಾಕ್ಷಿ ಮಹಾರಾಜ್ ಎಚ್ಚರಿಕೆ

Public TV
1 Min Read

ನವದೆಹಲಿ: ಬಿಜೆಪಿ ಮುಖಂಡ ಸಾಕ್ಷಿ ಮಹಾರಾಜ್ ವಿವಾದಾತ್ಮಕ ಹೇಳಿಕೆಯೊಂದನ್ನು ನೀಡಿದ್ದಾರೆ. ಒಂದು ವೇಳೆ ನೀವು ನನಗೆ ವೋಟ್ ಹಾಕದಿದ್ದರೆ ನಾನು ನಿಮಗೆ ಶಾಪ ಹಾಕುತ್ತೇನೆ ಎಂದು ಹೇಳುವ ಮೂಲಕ ಮತದಾರರಿಗೆ ಎಚ್ಚರಿಕೆ ನೀಡಿದ್ದಾರೆ.

ನಾನು ಒಬ್ಬ ಸನ್ಯಾಸಿ. ನೀವು ನಾನು ಗೆಲ್ಲುವಂತೆ ಮಾಡಿದರೆ ನಾನು ಗೆಲ್ಲುತ್ತೇನೆ. ಇಲ್ಲದಿದ್ದರೆ ದೇವಸ್ಥಾನದಲ್ಲಿ ಭಜನೆ, ಕೀರ್ತನೆಯನ್ನು ನಾನು ಮಾಡಿಕೊಂಡಿರುತ್ತೇನೆ. ಇಂದು ನಾನು ನಿಮ್ಮ ಮತಗಳನ್ನು ಕೇಳಲು ಬಂದಿದ್ದು, ನನ್ನನ್ನು ಗೆಲ್ಲಿಸಿ ಎಂದು ಕೇಳಿಕೊಂಡಿರುವುದಾಗಿ ರಾಷ್ಟ್ರೀಯ ಸುದ್ದಿವಾಹಿನಿಯೊಂದು ವರದಿ ಮಾಡಿದೆ.

ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ನೀವು ನನ್ನನ್ನು ಗೆಲ್ಲಿಸಬೇಕು. ನಾನು ನಿಮ್ಮ ಮನೆ ಬಾಗಿಲಿಗೆ ಬೇಡಲು ಬಂದಿದ್ದೇನೆ. ನೀವು ಸನ್ಯಾಸಿಗೆ ಭಿಕ್ಷೆ ಕೊಡಲು ನಿರಾಕರಿಸಿದರೆ ನಿಮ್ಮ ಕುಟುಂಬದ ಸಂತೋಷವನ್ನು ಕಿತ್ತುಕೊಂಡು ಹೋಗುತ್ತೇನೆ. ಮತ್ತು ನಿಮಗೆ ಶಾಪ ಹಾಕುತ್ತೇನೆ ಎಂದು ಸಾಕ್ಷಿ ಮಹಾರಾಜ್ ಹೇಳಿದ್ದಾರೆ.

ಸಾಕ್ಷಿ ಮಹಾರಾಜ್ ಹೇಳಿಕೆಗೆ ಪಕ್ಷ ಯಾವುದೇ ರೀತಿಯ ಪ್ರತಿಕ್ರಿಯೆ ನೀಡಿಲ್ಲ. ಒಟ್ಟಿನಲ್ಲಿ ಸಾಕ್ಷಿ ಮಹಾರಾಜ್ ತನ್ನ ವಿವಾದಾತ್ಮಕ ಹೇಳಿಕೆಗಳಿಂದಲೇ ಪ್ರಚಲಿತರಾಗಿದ್ದು, ಇದೀಗ ಬೆದರಿಕೆಯ ಮೂಲಕ ಮತ ಕೇಳಿರುವುದು ಸಾಕಷ್ಟು ಚರ್ಚೆಗೆ ಗ್ರಾಸವಾಗಿದೆ.

Share This Article
Leave a Comment

Leave a Reply

Your email address will not be published. Required fields are marked *