ಆಸ್ತಿ ಘೋಷಿಸಿಕೊಳ್ಳಲು ಉತ್ತರಪ್ರದೇಶ ಸಿಎಂ ಆದಿತ್ಯನಾಥ್‍ರಿಂದ ಸಚಿವರಿಗೆ ಖಡಕ್ ಆದೇಶ- 15 ದಿನ ಗಡುವು

Public TV
1 Min Read

ಲಕ್ನೋ: ಉತ್ತರಪ್ರದೇಶ ಸಿಎಂ ಆಗಿ ಅಧಿಕಾರ ಸ್ವೀಕರಿಸುತ್ತಲೇ ಯೋಗಿ ಆದಿತ್ಯನಾಥ್, ಆಡಳಿತದ ಮೇಲೆ ಪಟ್ಟು ಸಾಧಿಸಲು ಮುಂದಾಗಿದ್ದಾರೆ. ಆಸ್ತಿ ವಿವರ ಬಹಿರಂಗಪಡಿಸುವಂತೆ ತಮ್ಮ ಸಂಪುಟದ ಸಹೋದ್ಯೋಗಿಗಳಿಗೆ ಸೂಚಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಆಸ್ತಿ ವಿವರ ಘೋಷಿಸಿಕೊಳ್ಳಲು 15 ದಿನಗಳ ಕಾಲಾವಕಾಶವನ್ನು ಸಿಎಂ ಯೋಗಿ ಆದಿತ್ಯನಾಥ್ ತಮ್ಮ ಸಹೋದ್ಯೋಗಿಗಳಿಗೆ ನೀಡಿದ್ದಾರೆ. ಜೊತೆಗೆ ಯಾವುದೇ ವಿವಾದಾತ್ಮಕ ಹೇಳಿಕೆ ನೀಡಬೇಡಿ ಎಂದು ಸಚಿವರಿಗೆ ಖಡಕ್ ಸಂದೇಶ ರವಾನಿಸಿದ್ದಾರೆ ಎಂದು ಹೇಳಲಾಗಿದೆ.

ಭಾನುವಾರದಂದು ಯೋಗಿ ಆದಿತ್ಯನಾಥ್ ಉತ್ತರಪ್ರದೇಶದ 19ನೇ ಸಿಎಂ ಆಗಿ ಪ್ರಮಾಣವಚನ ಸ್ವೀಕರಿಸಿದ್ರು. 44 ವರ್ಷದ ಆದಿತ್ಯನಾಥ್, ಅಖಿಲೇಶ್ ಯಾದವ್ ನಂತರ ಉತ್ತರಪ್ರದೇಶದ ಎರಡನೇ ಅತ್ಯಂತ ಕಿರಿಯ ಸಿಎಂ ಆಗಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *