ಕೋಲಾರದಲ್ಲಿ ಶಾಸಕ ಮುನಿರತ್ನ ಪೊಲೀಸ್‌ ವಶಕ್ಕೆ

Public TV
0 Min Read

ಕೋಲಾರ: ಗುತ್ತಿಗೆದಾರನಿಗೆ ಜೀವ ಬೆದರಿಕೆ, ಜಾತಿ ನಿಂದನೆ ಆರೋಪದಡಿ ಬಿಜೆಪಿ ಶಾಸಕ ಮುನಿರತ್ನ (Muniratna) ಅವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಕೋಲಾರದ (Kolar) ಮುಳಬಾಗಿಲು ತಾಲೂಕಿನ ನಂಗಲಿ ಬಳಿ ಶನಿವಾರ ಸಂಜೆ ಶಾಸಕರನ್ನು ವಶಕ್ಕೆ ಪಡೆಯಲಾಗಿದೆ. ಕೋಲಾರ ಮಾರ್ಗವಾಗಿ ಆಂಧ್ರಪ್ರದೇಶಕ್ಕೆ ಮುನಿರತ್ನ ಅವರು ತೆರಳುತ್ತಿದ್ದಾಗ ಬೆಂಗಳೂರು ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆ.

ಶಾಸಕರನ್ನು ವಶಕ್ಕೆ ಪಡೆದು ಪೊಲೀಸರು ಬೆಂಗಳೂರಿಗೆ ವಾಪಸ್‌ ಆಗುತ್ತಿದ್ದಾರೆ. ಇದನ್ನೂ ಓದಿ: ಎಸ್ಟಿ ಪ್ರವರ್ಗಕ್ಕೆ ವಾಲ್ಮೀಕಿ ಸಮುದಾಯ, ಹಿಂದುಳಿದ ವರ್ಗಕ್ಕೆ ಕುಂಚಿಟಿಗ, ಸಾದರ, ವೀರಶೈವರನ್ನು ಸೇರಿಸಲು ಗೃಹ ಸಚಿವರ ಜೊತೆ ಚರ್ಚೆ: ಹೆಚ್‌ಡಿಕೆ

Share This Article