ವೋಟ್ ಹಾಕದಿದ್ರೆ ಯುಜಿಡಿ ಕಾಮಗಾರಿ ಮಾಡಲ್ಲ: ಶಾಸಕ ಪ್ರೀತಂಗೌಡ

Public TV
2 Min Read

ಹಾಸನ: ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ನನಗೆ ವೋಟ್ ಹಾಕದಿದ್ರೆ ಯುಜಿಡಿ ಕಾಮಗಾರಿ ಮಾಡಲ್ಲ ಎಂದು ಮತದಾರರಿಗೆ ನೇರವಾಗಿಯೇ ಶಾಸಕ ಪ್ರೀತಂಗೌಡ (Preetham Gowda) ಹೇಳಿದ್ದಾರೆ.

ಮುಸ್ಲಿಂ ಸಮುದಾಯದ ಮತದಾರರು ಹೆಚ್ಚಿರುವ ಹಾಸನದ (Hassan) ಶ್ರೀನಗರ ಬಡಾವಣೆಗೆ ಕಳೆದ ರಾತ್ರಿ ಭೇಟಿ ನೀಡಿದ ಅವರು, ವಿದ್ಯುತ್ ಇಲ್ಲದಿದ್ದರೂ ಕತ್ತಲಲ್ಲೇ ಸ್ಥಳೀಯರನ್ನು ಉದ್ದೇಶಿಸಿ ಮಾತನಾಡಿದರು. ಯಾರು ಕೆಲಸ ಮಾಡುತ್ತಾರೆ ಅವರಿಗೆ ವೋಟು ಹಾಕಬೇಕು. ಕೆಲಸವಾಗುವವರೆಗೂ ನಮ್ಮ ಜೊತೆಯಲ್ಲೇ ಇದ್ದು, ಕೊನೆಗೆ ನಾವು ಬಿಜೆಪಿಗೆ (BJP) ವೋಟ್ ಹಾಕಲ್ಲ ಎಂದು ಹೇಳಿದರೆ ಕೆಲಸ ಮಾಡಿದವರಿಗೂ ಕೋಪ ಬರುತ್ತದೆ ಎಂದು ಹೇಳಿದರು.

ನೀವು ಬೆಳಗ್ಗೆಯಿಂದಲೂ ಕೂಲಿಗೆ ಹೋಗೋರು ಅಂತೀರಾ, ಸಂಜೆ ಕೂಲಿ ಕೊಡದೇ ಹೋದ್ರೆ ಬಿಡ್ತೀರಾ? ಅದೇ ರೀತಿಯೇ ನಾನು ಇಲ್ಲಿ ಕೆಲಸ ಮಾಡಿರುತ್ತೇನೆ. ಅದಕ್ಕೆ ವೋಟ್‍ನ್ನು ಕೇಳುತ್ತೇವೆ, ಆಗ ನೀವು ನನಗೆ ವೋಟ್ ಹಾಕದೇ ನಾನು ಕಾಂಗ್ರೆಸ್ (Congress), ನಿಮಗೆ ವೋಟ್ ಹಾಕುವುದಿಲ್ಲ ಎಂದರೆ ಆಗ ನಾನು ಸುಮ್ಮನಿರುವುದಿಲ್ಲ ಎಂದು ವಾರ್ನಿಂಗ್ ನೀಡಿದರು.

ಮುಸಲ್ಮಾನರನ್ನು ನಮ್ಮ ಸಹೋದರರ ರೀತಿಯಲ್ಲೇ ನೋಡುತ್ತೇನೆ. ಮುಂದೆಯೂ ಇದೇ ಭಾವನೆ ಇರುತ್ತದೆ. ಆದರೆ ನಾನು ಕೆಲಸ ಮಾಡಿದ ಸಂದರ್ಭದಲ್ಲಿ ನೀವು ನನಗೆ ಸಹಾಯ ಮಾಡಿಲ್ಲ ಎಂದರೆ ನಿಮ್ಮ ಕಡೆಯೂ ತಿರುಗಿ ನೋಡಲ್ಲ. ಈ ರೀತಿ ತೀರ್ಮಾನ ತೆಗೆದುಕೊಳ್ಳದ ರೀತಿ ನೋಡಿಕೊಳ್ಳುವ ಜವಾಬ್ದಾರಿ ನಿಮ್ಮದು ಎಂದರು.

ಈಗಾಲೇ ಮೂರು ಸಾರಿ ಕೈಕೊಟ್ಟಿದ್ದೀರಾ. ಹಿಂದಿನ ವಿಧಾನ ಸಭಾ ಚುನಾವಣೆ ನಡೆದಾಗಲೂ ವೋಟ್ ಹಾಕಿರಲಿಲ್ಲ. ಅದಾದ ಬಳಿಕ ಕೌನ್ಸಿಲರ್ ಹಾಗೂ ಸಂಸದರ ಚುನಾವಣೆಯಲ್ಲೂ ವೋಟ್ ಹಾಕಿರಲಿಲ್ಲ. ಇದೀಗ ವಿಧಾನಸಭಾ ಚುನಾವಣೆ ಬರುತ್ತಿದೆ. ಆ ಸಂದರ್ಭದಲ್ಲಿ ನೀವೇನಾದ್ರು ಕೈಕೊಟ್ರೆ ನಾನು ಕೈ, ಕಾಲು ಕೊಡ್ತೀನಿ. ನನ್ನ ಮನೆಗೆ ಬಂದರೆ ಕಾಫಿ ಕುಡಿಸಿ ಕಳುಹಿಸುತ್ತೇನೆ. ಯಾವ ಕೆಲಸವನ್ನು ಮಾಡಿಕೊಡುವುದಿಲ್ಲ ಎಂದು ತಿಳಿಸಿದರು. ಇದನ್ನೂ ಓದಿ: ಲಾರಿ, ಕಾರು ನಡುವೆ ಭೀಕರ ಅಪಘಾತ- ಮೂವರು ಸಾವು

ಅವರಿಗೆ ವೋಟ್ ಹಾಕಬೇಡಿ, ನಾನು ನಿಮ್ಮ ಕೆಲಸವನ್ನೆಲ್ಲಾ ಮಾಡಿಕೊಡುತ್ತೇನೆ ಎಂದು ಹೇಳುತ್ತಾರೆ. ಆ ರೀತಿ ಹೇಳುವವರ ಮನೆಯಲ್ಲಿ ಮೂರು ಸಾರಿ ಮುಖ್ಯಮಂತ್ರಿ ಆಗಿದ್ದರು. ದೊಡ್ಡಗೌಡರು ಒಂದು ಸಾರಿ, ಕುಮಾರಣ್ಣ ಎರಡು ಸಾರಿ ಮುಖ್ಯಮಂತ್ರಿ ಆಗಿದ್ದರು. ರೇವಣ್ಣ ಅವರು ನಾಲ್ಕು ಸಾರಿ ಮಂತ್ರಿಯಾಗಿದ್ದರು. ಆದರೆ ಯಾವತ್ತೂ ಶ್ರೀನಗರಕ್ಕೆ ಬಂದಿಲ್ಲ ಎಂದು ಕಿಡಿಕಾರಿದರು. ಇದನ್ನೂ ಓದಿ: ಜೆರ್ಸಿ ದ್ವೀಪದಲ್ಲಿ ಭೀಕರ ಸ್ಫೋಟ – ಮೂವರು ಸಾವು, 12 ಮಂದಿ ನಾಪತ್ತೆ

Live Tv
[brid partner=56869869 player=32851 video=960834 autoplay=true]

Share This Article
Leave a Comment

Leave a Reply

Your email address will not be published. Required fields are marked *