ಭಂಡ ಧೈರ್ಯದಿಂದ ಸಿಎಂ ಬಹುಮತ ಸಾಬೀತು ಮಾಡ್ತೀನಿ ಎಂದಿದ್ದಾರೆ: ಕರಂದ್ಲಾಜೆ

Public TV
1 Min Read

ಬೆಂಗಳೂರು: ಭಂಡ ಧೈರ್ಯದಿಂದ ಸಿಎಂ ಬಹುಮತ ಸಾಬೀತು ಮಾಡುತ್ತೇನೆ ಅಂತ ಹೇಳಿದ್ದಾರೆ. ಆದರೆ ಅವರಿಗೆ ಬಹುಮತವೇ ಇಲ್ಲ ಎಂದು ಸಂಸದೆ ಶೋಭಾ ಕರಂದ್ಲಾಜೆ ವ್ಯಂಗ್ಯವಾಡಿದ್ದಾರೆ.

ರಮಡ ರೆಸಾರ್ಟಿನಲ್ಲಿ ನಡೆದ ಬಿಜೆಪಿ ಶಾಸಕಾಂಗ ಸಭೆಯ ಬಳಿಕ ಮಾತನಾಡಿದ ಮಾತನಾಡಿದ ಅವರು, ನಾಳೆಯ ಅಧಿವೇಶನಕ್ಕೆ ನಮ್ಮ ಶಾಸಕರು ತಯಾರಿ ನಡೆಸುತ್ತಿದ್ದಾರೆ. ಸಭಾಧ್ಯಕ್ಷರ ಅಜೆಂಡಾಕ್ಕೆ ಪೂರಕವಾಗಿ ಸದನದಲ್ಲಿ ಭಾಗಿಯಾಗಲು ಸಭೆಯಲ್ಲಿ ನಿರ್ಧಾರವಾಗಿದೆ. ಬಹುಮತ ಸಾಬೀತಿಗೆ ದಿನಾಂಕ ನಿಗದಿ ಮಾಡಿ ಎಂದು ಸಿಎಂ, ಸ್ಪೀಕರ್ ರಮೇಶ್ ಕುಮಾರ್ ಅವರಿಗೆ ಮನವಿ ಮಾಡಿದ್ದಾರೆ. ಈ ಮೂಲಕ ಧೈರ್ಯದಿಂದಲೇ ಬಹುಮತ ಸಾಬೀತು ಮಾಡುತ್ತೇನೆ ಎಂದು ಹೇಳಿದ್ದಾರೆ. ಹೀಗಾಗಿ ನಾಳೆಯೇ ಬಹುಮತ ಸಾಬೀತು ಮಾಡುತ್ತೇನೆ ಅಂತ ಕಲಾಪ ಸಲಹಾ ಸಮಿತಿ ಸಭೆಯಲ್ಲಿ ಸಿಎಂ ನಿರ್ಧಾರ ಕೈಗೊಳ್ಳಲಿ ಎಂದು ಸವಾಲು ಹಾಕಿದರು.

ಸಿಎಂ ರಾಜೀನಾಮೆ ನೀಡಲಿ ಅಥವಾ ಬಹುಮತ ಸಾಬೀತಿಗೆ ದಿನಾಂಕ ನಿಗದಿ ಮಾಡಲಿ. ರಾಜ್ಯದಲ್ಲಿ ಸಮಸ್ಯೆಗಳಿವೆ, ಸ್ಥಿರ ಸರ್ಕಾರ ಬರಲು ಅವರು ಅವಕಾಶ ಮಾಡಿಕೊಡಬೇಕು ಎಂದು ಸಂಸದೆ ಶೋಭಾ ಕರಂದ್ಲಾಜೆ ಕುಟುಕಿದರು.

ಶಾಸಕರ ರಾಜೀನಾಮೆ ಅನರ್ಹತೆ ಪ್ರಕರಣ ಸುಪ್ರೀಂಕೋರ್ಟ್ ನಲ್ಲಿದೆ. ಸುಪ್ರೀಂಕೋರ್ಟ್ ನಲ್ಲಿ ಏನಾಗಬಹುದು ಎಂದು ತಿಳಿದುಕೊಳ್ಳಲು ನಮ್ಮ ಕೆಲ ಮುಖಂಡರು ದೆಹಲಿಗೆ ಹೋಗಿದ್ದರು. ಆರ್.ಅಶೋಕ್ ಅವರು ಬೇರೆ ಕೆಲಸದಲ್ಲಿದಾರೆ. ಹೀಗಾಗಿ ಇಂದಿನ ಸಭೆಗೆ ಹಾಜರಾಗಿಲ್ಲ. ಬಿಜೆಪಿ ಮುಖಂಡ ಕೆ.ಎಸ್.ಈಶ್ವರಪ್ಪ ಅವರು ಕೂಡ ವೈಯಕ್ತಿಕ ಕೆಲಸದಲ್ಲಿದ್ದಾರೆ. ಮಾಜಿ ಸಿಎಂ ಜಗದೀಶ್ ಶೆಟ್ಟರ್ ಅವರ ಸಂಬಂಧಿಕರೊಬ್ಬರು ಮೃತಪಟ್ಟಿದ್ದರಿಂದ ಸಭೆಗೆ ಆಗಮಿಸಿಲ್ಲ ಎಂದು ಹೇಳಿದರು.

Share This Article
Leave a Comment

Leave a Reply

Your email address will not be published. Required fields are marked *