ಎಚ್‌ಡಿಕೆ ಹೇಳಿಕೆ ಬೆನ್ನಲ್ಲೇ ಶೃಂಗೇರಿಗೆ ಭೇಟಿ ನೀಡಲಿದ್ದಾರೆ ನಡ್ಡಾ

Public TV
1 Min Read

ಬೆಂಗಳೂರು: ಕರ್ನಾಟಕ ಚುನಾವಣೆಗೆ (Karnataka Election) ಕೆಲವೇ ತಿಂಗಳು ಇದ್ದು  ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ (JP Nadda) ಶೃಂಗೇರಿಗೆ ಭೇಟಿ ನೀಡಲಿದ್ದಾರೆ.

ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ (Pralhad Joshi) ಅವರನ್ನು ಉಲ್ಲೇಖಿಸಿ ಮಾಜಿ ಎಂ ಕುಮಾರಸ್ವಾಮಿ (HD Kumaraswamy) ಹೇಳಿಕೆಯ ಬೆನ್ನಲ್ಲೇ ಜೆಪಿ ನಡ್ಡಾ ಅವರ ಶೃಂಗೇರಿ (Sringeri) ಪ್ರವಾಸ ನಿಗದಿಯಾಗಿದೆ.

ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ ಅವರನ್ನು ಸಿಎಂ ಮಾಡಲು ಆರ್‌ಎಸ್‍ಎಸ್ (RSS) ಮುಂದಾಗಿದೆ. ಅವರು ಶೃಂಗೇರಿ ಮಠವನ್ನು ಒಡೆದ ಗುಂಪಿನ ಬ್ರಾಹ್ಮಣರು. ಅವರ ಬಗ್ಗೆ ಎಚ್ಚರಿಕೆಯಿಂದ ಇರಬೇಕು ಎಂದು ಕಳೆದ ವಾರ ಕುಮಾರಸ್ವಾಮಿ ಹೇಳಿಕೆ ನೀಡಿದ್ದರು.  ಇದನ್ನೂ ಓದಿ: 7ನೇ ವೇತನ ಆಯೋಗ ಜಾರಿ, ನೌಕರರಿಗೆ ಸಕಾಲಕ್ಕೆ ಸಂಬಳ: ಜೆಪಿ ನಡ್ಡಾ ಭರವಸೆ

ಈ ಹೇಳಿಕೆಗೆ ಸಾಕಷ್ಟು ವಿರೋಧ ವ್ಯಕ್ತವಾದ ನಂತರವೂ ಕುಮಾರಸ್ವಾಮಿ ತಮ್ಮ ಹೇಳಿಕೆಗೆ ಬದ್ಧರಾಗಿದ್ದರು. ಅಲ್ಲದೇ ಅವಕಾಶ ಸಿಕ್ಕಾಗಲೆಲ್ಲಾ ಪೇಶ್ವೇ ಬ್ರಾಹ್ಮಣರ ಬಗ್ಗೆ ಪ್ರಸ್ತಾಪ ಮಾಡುತ್ತಾ ವಿವಾದವನ್ನು ಜೀವಂತವಾಗಿ ಇಡಲು ಮಾಜಿ ಸಿಎಂ ಪ್ರಯತ್ನ ನಡೆಸಿದ್ದರು.


ಕುಮಾರಸ್ವಾಮಿಯ ಈ ತಂತ್ರಕ್ಕೆ ಟಕ್ಕರ್ ಎಂಬಂತೆ ಫೆಬ್ರವರಿ 20ರಂದು ರಾಜ್ಯ ಪ್ರವಾಸ ಕೈಗೊಳ್ಳುತ್ತಿರುವ ಜೆಪಿ ನಡ್ಡಾ ಶೃಂಗೇರಿ ಮಠದ ಜಗದ್ಗುರುಗಳ ಭೇಟಿಗೆ ಸಮಯ ಕೇಳಿದ್ದಾರೆ. ಫೆಬ್ರವರಿ 20ರಂದು ರಾತ್ರಿ ಶೃಂಗೇರಿ ದೇವಸ್ಥಾನಕ್ಕೆ ಭೇಟಿ ನೀಡಲಿರುವ ಜೆಪಿ ನಡ್ಡಾ ಶ್ರೀಗಳನ್ನು ಭೇಟಿ ಮಾಡಲು ಪ್ಲಾನ್ ಮಾಡಿದ್ದಾರೆ.

Live Tv
[brid partner=56869869 player=32851 video=960834 autoplay=true]

Join our Whatsapp group by clicking the below link
https://chat.whatsapp.com/E6YVEDajTzH06LOh77r25k

Share This Article
Leave a Comment

Leave a Reply

Your email address will not be published. Required fields are marked *