ಗೌರಿ ಲಂಕೇಶ್ ಹತ್ಯೆಯಲ್ಲಿ ಬಿಜೆಪಿ ಪಾತ್ರವಿಲ್ಲ: ಜಗದೀಶ್ ಶೆಟ್ಟರ್

Public TV
1 Min Read

ಹುಬ್ಬಳ್ಳಿ: ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಪ್ರಕರಣದಲ್ಲಿ ಬಿಜೆಪಿಯ ಪಾತ್ರವಿಲ್ಲ. ಹಿಂದಿನಿಂದಲೂ ಗೌರಿ ಹತ್ಯೆಯ ಪ್ರಕರಣದಲ್ಲಿ ಬಿಜೆಪಿ ಹೆಸರನ್ನು ತಳುಕು ಮಾಡಲಾಗುತ್ತಿದೆ ಎಂದು ಮಾಜಿ ಸಿಎಂ ಜಗದೀಶ್ ಶೆಟ್ಟರ್ ಹೇಳಿದ್ದಾರೆ.

ಇದೂವರೆಗೂ ಅಧಿಕಾರಿಗಳು ಯಾವುದೇ ಮಾಹಿತಿಯನ್ನು ಹೊರ ಹಾಕಿಲ್ಲ. ಪ್ರಕರಣಕ್ಕೆ ಸಂಬಂಧಿಸಿದಂತೆ ಹಂತಕ ಎನ್ನಲಾದ ಯುವಕನೋರ್ವನನ್ನು ಎಸ್‍ಐಟಿ ಅಧಿಕಾರಿಗಳು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ. ಆದರೆ ಯುವಕನ ಪೋಷಕರ ಹೇಳಿಕೆಗಳನ್ನು ಕೇಳಿದ್ರೆ ಹಲವು ಪ್ರಶ್ನೆಗಳು ಹುಟ್ಟಿಕೊಳ್ಳುತ್ತವೆ ಅಂತಾ ಅನುಮಾನ ವ್ಯಕ್ತಪಡಿಸಿದರು.

ಗೌರಿಯವರ ಹತ್ಯೆಯ ಬಳಿಕ 9 ತಿಂಗಳ ನಂತರ ಆರೋಪಿಗಳನ್ನು ಬಂಧಿಸಲಾಗಿದೆ. ಆದರೆ ಸಾಹಿತಿ ಎಂ.ಎಂ.ಕಲಬುರ್ಗಿ ಯವರ ಹತ್ಯೆ ನಡೆದು ಎರಡ್ಮೂರು ವರ್ಷ ಕಳೆದ್ರೂ ಆರೋಪಿಗಳನ್ನು ಬಂಧಿಸಿಲ್ಲ. ಇನ್ನು ಸಂಪೂರ್ಣ ತನಿಖೆ ನಡೆಯಬೇಕಿದೆ. ತನಿಖೆಯಾದ ಮೇಲೆ ತಪ್ಪಿತಸ್ಥರು ಯಾರೆಂದು ಗೊತ್ತಾಗಲಿದೆ. ತಪ್ಪು ಯಾರೇ ಮಾಡಿದ್ರೂ ಅವರಿಗೆ ಕಾನೂನಿನ ಪ್ರಕಾರ ಶಿಕ್ಷೆ ಆಗಲೇಬೇಕು ಎಂದು ತಿಳಿಸಿದ್ರು.

Share This Article
Leave a Comment

Leave a Reply

Your email address will not be published. Required fields are marked *