ಸಮ್ಮಿಶ್ರ ಸರ್ಕಾರದ ಭಿನ್ನಮತದ ಲಾಭ ಪಡೆಯಲು ತೆರೆಮರೆಯಲಿ ಬಿಜೆಪಿ ತಂತ್ರ !

Public TV
1 Min Read

ಬೆಂಗಳೂರು: ಸಚಿವ ಸಂಪುಟ ರಚನೆಯಾದ ಬೆನ್ನಲ್ಲೆ ಕಾಂಗ್ರೆಸ್ ಮತ್ತು ಜೆಡಿಎಸ್ ಶಾಸಕರ ನಡುವ ಅಸಮಾಧಾನದ ಸ್ಫೋಟ ಭುಗಿಲೆದ್ದಿದೆ. ಆದರೆ ಇತ್ತ ಸಮ್ಮಿಶ್ರ ಸರ್ಕಾರದ ಭಿನ್ನಮತದ ಲಾಭ ಪಡೆಯಲು ಬಿಜೆಪಿ ತೆರೆಮರೆಯಲ್ಲಿ ತಂತ್ರ ರೂಪಿಸುತ್ತಿದೆ.

ಸಚಿವ ಸ್ಥಾನ ಸಿಗದಿರುವ ಅತೃಪ್ತರನ್ನು ಸೆಳೆಯುವ ಬದಲು, ಕಾದು ನೋಡುವ ತಂತ್ರಕ್ಕೆ ಬಿಜೆಪಿ ಮೊರೆ ಹೋದಂತೆ ಕಾಣುತ್ತಿದೆ. ಒಮ್ಮೆ ಆದ ತಪ್ಪಿನಿಂದ ಮೈತ್ರಿ ಸರ್ಕಾರ ಅಸ್ತಿತ್ವಕ್ಕೆ ಬಂದಿದೆ. ಈ ಹಂತದಲ್ಲಿ ಆಪರೇಷನ್ ಕಮಲಕ್ಕೆ ಕೈ ಹಾಕಿದರೆ ಜನರ ಬಳಿ ಅಪಕೀರ್ತಿಗೆ ಒಳಗಾಗಬೇಕಾಗುತ್ತೆ. ಹೀಗಾಗಿ ನೀವಾಗಿಯೇ ಯಾವುದೇ ಯತ್ನ ನಡೆಸುವುದು ಬೇಡ ಎಂದು ಬಿಜೆಪಿ ವರಿಷ್ಠರು, ರಾಜ್ಯ ನಾಯಕರಿಗೆ ಸೂಚಿಸಿದ್ದಾರೆ ಎನ್ನಲಾಗುತ್ತಿದೆ.

ಒಂದು ವೇಳೆ 10ಕ್ಕಿಂತ ಹೆಚ್ಚು ಸಚಿವ ಸ್ಥಾನ ಸಿಗದ ಅತೃಪ್ತರು ರಾಜೀನಾಮೆ ಕೊಟ್ಟು ಹೊರ ಬಂದರೆ ಅವರನ್ನು ಪಕ್ಷಕ್ಕೆ ಸೇರಿಸಿಕೊಳ್ಳುವುದು. ಸರ್ಕಾರ ಅಲ್ಪಮತಕ್ಕೆ ಸಿಲುಕಿದೆ. ನೈತಿಕ ಹೊಣೆ ಹೊತ್ತು ಸರ್ಕಾರ ವಿಸರ್ಜಿಸಬೇಕು ಎಂಬ ಜನಾಂದೋಲನ ನಡೆಸುವುದು ಬಿಜೆಪಿಯ ಪ್ಲಾನ್ ಆಗಿದೆ ಅಂತಾ ಹೇಳಲಾಗುತ್ತಿದೆ.

Share This Article
Leave a Comment

Leave a Reply

Your email address will not be published. Required fields are marked *