ನಿಮ್ಮನ್ನ ಚಾಮುಂಡೇಶ್ವರಿ ಕ್ಷೇತ್ರದ ಜನರೇ ತಿರಸ್ಕಾರ ಮಾಡಿದ್ದಾರೆ: ಸಿದ್ದು ಕಾಲೆಳೆದ ಬಿಜೆಪಿ

Public TV
2 Min Read

ಬೆಂಗಳೂರು: ಚಾಮುಂಡೇಶ್ವರಿ ಕ್ಷೇತ್ರದಲ್ಲಿ ನೀವು ಬೇಡವೆಂದೇ ಜನರು ತಿರಸ್ಕಾರ ಮಾಡಿದ್ದು. ಮತ್ತೊಮ್ಮೆ ನೀವು ಅಲ್ಲಿ ನಿಂತರೂ ಜನರು ತಿರಸ್ಕಾರ ಮಾಡುವುದು ಶತಸಿದ್ಧ ಎಂದು ಸಿದ್ದರಾಮಯ್ಯಗೆ ಬಿಜೆಪಿ ಟಾಂಗ್ ನೀಡಿದೆ.

ಸಿದ್ದರಾಮಯ್ಯ ಅವರು ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಸ್ಪರ್ಧಿಸಲ್ಲ ಎಂದು ಹೇಳಿದ್ದರು. ಈ ವಿಷಯಕ್ಕೆ ಸಂಬಂಧಿಸಿ ಬಿಜೆಪಿ ಟ್ವೀಟ್ ಮೂಲಕ ಕಾಲೆಳೆದಿದೆ.

ಟ್ವೀಟ್‍ನಲ್ಲಿ ಏನಿದೆ?:
ಮಾನ್ಯ ಸಿದ್ದರಾಮಯ್ಯ ಅವರೇ, ನಿಮ್ಮನ್ನು ಚಾಮುಂಡೇಶ್ವರಿ ಕ್ಷೇತ್ರದಲ್ಲಿ ನೀವು ಬೇಡವೆಂದೇ ಜನರು ತಿರಸ್ಕಾರ ಮಾಡಿದ್ದು. ಮತ್ತೊಮ್ಮೆ ನೀವು ಅಲ್ಲಿ ನಿಂತರೂ ಜನರು ತಿರಸ್ಕಾರ ಮಾಡುವುದು ಶತಸಿದ್ಧ. ಮತ್ತೊಮ್ಮೆ ಚಾಮುಂಡೇಶ್ವರಿಯಲ್ಲಿ ಮುಖಭಂಗ ಮಾಡಿಕೊಳ್ಳುವುದಕ್ಕಿಂತ ನಿಮ್ಮ ಈ ನಿರ್ಧಾರ ಸರಿಯಾಗಿಯೇ ಇದೆ ಎಂದು ತಿಳಿಸಿದೆ. ಇದನ್ನೂ ಓದಿ: ಪಕ್ಷಾಂತರ ಕೇವಲ ಊಹಾಪೋಹ: ಬೊಮ್ಮಾಯಿ

ಪಂಚ ರಾಜ್ಯಗಳ ಚುನಾವಣಾ ಫಲಿತಾಂಶದ ಬಳಿಕ ಒಂದಷ್ಟು ಜನ ಸೋನಿಯಾ ಹಾಗೂ ಪ್ರಿಯಾಂಕಾ ಗಾಂಧಿ ಅವರ ರಾಜೀನಾಮೆ ಕೇಳುತ್ತಿದ್ದಾರೆ. ಕಾಂಗ್ರೆಸ್ ಪಕ್ಷದಲ್ಲಿ ನೈತಿಕ ಹೊಣೆ ಎಂಬ ಶಬ್ದಕ್ಕೆ ಅರ್ಥವಿದೆಯೇ? ಅವರವರೇ, ಅವರ ಕುಟುಂಬದೊಳಗೆ ಜವಾಬ್ದಾರಿ ಹಂಚಿಕೊಳ್ಳುವ ವಾಸ್ತವತೆಯಲ್ಲಿ ನಕಲಿ ಗಾಂಧಿಗಳು ರಾಜೀನಾಮೆ ನೀಡುವುದು ಹೇಗೆ ಸಾಧ್ಯ? ಸ್ವಾತಂತ್ರ್ಯದ ಬಳಿಕ ಕಾಂಗ್ರೆಸ್ ವಿಸರ್ಜಿಸಿ ಎಂದು ಗಾಂಧೀಜಿ ಪ್ರತಿಪಾದಿಸಿದ್ದರು. ಆದರೆ ನಕಲಿ ಗಾಂಧಿಗಳು, ನಕಲಿ ಕಾಂಗ್ರೆಸ್ಸಿಗರು ಗಾಂಧೀಜಿ ಮಾತಿಗೆ ಬೆಲೆ ಕೊಡಲಿಲ್ಲ. ಕಾಲವೇ ಎಲ್ಲದಕ್ಕೂ ಉತ್ತರ ನೀಡುತ್ತದೆ ಎಂಬಂತೆ ಈಗ ಜನರೇ ಕಾಂಗ್ರೆಸ್ ಪಕ್ಷವನ್ನು ವಿಸರ್ಜಿಸಿದ್ದಾರೆ. ಇನ್ನಾದರೂ ನಕಲಿ ಗಾಂಧಿ ಕುಟುಂಬ ಪೂಜಕರು ಬುದ್ಧಿ ಕಲಿಯಬಹುದೇ ಎಂದು ಟೀಕಿಸಿದೆ. ಇದನ್ನೂ ಓದಿ: ‘ಪಂಚ’ ಫಲಿತಾಂಶದ ಬೆನ್ನಲ್ಲೇ ರಾಜ್ಯ ರಾಜಕೀಯದಲ್ಲಿ ಸಂಚಲನ- ಬಿಜೆಪಿಯಲ್ಲೂ ‘ಹೈ’ ಆಪರೇಷನ್..!

Share This Article
Leave a Comment

Leave a Reply

Your email address will not be published. Required fields are marked *