ಮೋದಿ ಬಗ್ಗೆ ಮಾತನಾಡುವ ಮೊದಲು, ನೀನು ಗಂಡಸು ಅನ್ನೋದನ್ನು ಪರೀಕ್ಷಿಸಿಕೋ: ನಾರಾಯಣರಾವ್‍ಗೆ ಜಿಲ್ಲಾಧ್ಯಕ್ಷೆ ಸವಾಲ್

Public TV
1 Min Read

ಕಲಬುರಗಿ: ಪ್ರಧಾನಿ ನರೇಂದ್ರ ಮೋದಿ ಬಗ್ಗೆ ಮಾತನಾಡುವ ಮೊದಲು ನೀನು ಗಂಡಸೇ ಎನ್ನುವುದನ್ನ ಪರೀಕ್ಷಿಸಿಕೋ ಎಂದು ಬಿಜೆಪಿ ಮಹಿಳಾ ಮೋರ್ಚಾದ ಅಧ್ಯಕ್ಷೆ ದಿವ್ಯಾ ಹಾಗಾರಗಿ ಬಸವಕಲ್ಯಾಣ ಶಾಸಕ ಬಿ. ನಾರಾಯಣರಾವ್‍ಗೆ ಸವಾಲ್ ಹಾಕಿದ್ದಾರೆ.

ಮೋದಿ ವಿರುದ್ಧ ಬಿ ನಾರಾಯಣರಾವ್ ವಿವಾದತ್ಮಕ ಹೇಳಿಕೆ ಖಂಡಿಸಿ, ಕಲಬುರಗಿ ನಗರದ ಸರ್ಧಾರ್ ವಲ್ಲಭಬಾಯಿ ಪಟೇಲ್ ವೃತ್ತದಲ್ಲಿ ದಿವ್ಯಾ ಹಾಗಾರಗಿ ನೇತೃತ್ವದಲ್ಲಿ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ಮಾಡಿದ್ದಾರೆ. ಈ ವೇಳೆ ನಾರಾಯಣರಾವ್ ಅವರ ಭಾವಚಿತ್ರಕ್ಕೆ ಸಗಣಿ ಎರಚಿ ತೀವ್ರ ಆಕ್ರೋಶ ಹೊರಹಾಕಿದ್ದಾರೆ.

ಈ ಬಗ್ಗೆ ಮಾಧ್ಯಮಗಳ ಜೊತೆ ಮಾತನಾಡಿದ ದಿವ್ಯಾ ಅವರು, ವಿಶ್ವಗುರು ಬಸವಣ್ಣನವರ ಕರ್ಮಭೂಮಿ ಬಸವಕಲ್ಯಾಣದಲ್ಲಿ ಎಂಥಹ ಸಂಸ್ಕೃತಿಯಿಂದ ಮಾತಾನಾಡಬೇಕು ಅಂತ ಕನಿಷ್ಟ ಜ್ಞಾನವಿಲ್ಲದ, ನಿನ್ನಂಥವನಿಗೆ ಆಯ್ಕೆ ಮಾಡಿದ್ದು ಶರಣರ ನಾಡಿನ ಜನರ ದುರ್ದೈವ. ಮೋದಿಯವರ ಬಗ್ಗೆ ಕೀಳಾಗಿ ಮಾತಾನಾಡುವ ಬದಲು, ನೀನು ಗಂಡಸೇ ಎನ್ನುವುದನ್ನ ಮೊದಲು ಪರೀಕ್ಷಿಸಿಕೋ ಎಂದು ಕಿಡಿಕಾರಿದ್ದಾರೆ. ಅಲ್ಲದೇ ಬಸವಕಲ್ಯಾಣದ ಜನರಿಗೆ ಸ್ವಾಭಿಮಾನವಿದ್ದಲ್ಲಿ ಮೊದಲು ನಾರಾಯಣರಾವ್‍ನನ್ನ ಕ್ಷೇತ್ರದಿಂದ ಹೊರಹಾಕಿ ಅಂತ ಕರೆ ನೀಡಿದ್ದಾರೆ.

ನಾರಾಯಣರಾವ್ ಹೇಳಿದ್ದು ಏನು?
ಜಿಲ್ಲೆಯಲ್ಲಿ ನಡೆದ ಕೈ ಪರಿವರ್ತನಾ ರ್ಯಾಲಿಯಲ್ಲಿ ಮಾತನಾಡಿದ ನಾರಾಯಣ ರಾವ್, ಮಲ್ಲಿಕಾರ್ಜುನ ಖರ್ಗೆ ಅವರ ಹಿಂದೆ ಇಡೀ ದೇಶವಿದೆ. ಆದರೆ ಅದು ಮೋದಿಗೆ ಅರ್ಥವಾಗುತ್ತಿಲ್ಲ. ನಾಮರ್ಧ್ ಕೇ ಸಾಥ್ ಶಾದಿ ಹೋ ಸಕ್ತಿ ಹೈ, ಮಗರ್ ಔಲಾದ್ ನಹೀ ಹೋತಿ ಹೈ (ಷಂಡರ ಜೊತೆ ಮದ್ವೆಯಾಗುತ್ತದೆ. ಆದರೆ ಮಕ್ಕಳಾಗಲ್ಲ). ಮೋದಿ ಸೇ ಶಾದಿ ಹೋ ಸಕ್ತಿ ಹೈ, ಮಗರ್ ಔಲಾದ್ ನಹೀ ಹೋತೆ ಹೈ(ಮೋದಿ ಜೊತೆ ಮದ್ವೆಯಾಗಬಹುದು, ಆದರೆ ಮೋದಿಗೆ ಮಕ್ಕಳಾಗಲ್ಲ) ಎಂದು ಹೇಳಿ ಪ್ರಧಾನಿ ಅವರನ್ನು ಷಂಡರಿಗೆ ಹೋಲಿಸಿ ವ್ಯಂಗ್ಯವಾಡಿದ್ದರು.

ಮಲ್ಲಿಕಾರ್ಜುನ ಖರ್ಗೆಯನ್ನು ಎದುರಿಸೋ ಶಕ್ತಿ ಮೋದಿಗಿಲ್ಲ. ಮಲ್ಲಿಕಾರ್ಜುನ ಖರ್ಗೆ ಮುಂದೊಂದು ದಿನ ದೇಶದ ಪ್ರಧಾನಿಯಾಗಲಿದ್ದಾರೆ ಎನ್ನುತ್ತ ಹಿಂದಿಯ ಶಾಯರಿಯೊಂದನ್ನು ಬಳಸಿ ಮೋದಿ ಅವರಿಗೆ ವಿರುದ್ಧ ಅವಹೇಳನಕಾರಿ ಹೇಳಿಕೆಯನ್ನು ನಾರಾಯಣ್‍ರಾವ್ ನೀಡಿದ್ದಕ್ಕೆ ಭಾರೀ ಟೀಕೆ ವ್ಯಕ್ತವಾಗಿತ್ತು.

Share This Article
Leave a Comment

Leave a Reply

Your email address will not be published. Required fields are marked *