ಬಿಜೆಪಿ ಕಾರ್ಯಕರ್ತೆ ಶಂಕುತಲಾ ನಟರಾಜ್ ಪುತ್ರ ಆತ್ಮಹತ್ಯೆ

Public TV
1 Min Read

ತುಮಕೂರು: ಬಿಜೆಪಿ ಕಾರ್ಯಕರ್ತೆ ಶಂಕುತಲಾ ನಟರಾಜ್ (BJP worker Shankutala Nataraj) ಅವರ ಪುತ್ರ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಘಟನೆ ತುಮಕೂರಿನ ವಿಜಯನಗರದಲ್ಲಿ ನಡೆದಿದೆ.

ಮೃತ ಬಾಲಕನನ್ನು ತ್ರಿಶಾಲ್ (13) ಎಂದು ಗುರುತಿಸಲಾಗಿದೆ. ಮೃತ ಬಾಲಕ 7 ನೇ ತರಗತಿಯಲ್ಲಿ ಓದುತ್ತಿದ್ದ.

ತ್ರಿಶಾಲ್‌ ತನ್ನ ತಾಯಿ ಶಂಕುತಲಾ ಜೊತೆ ವಿಜಯನಗರದ 2 ನೇ ಮುಖ್ಯ ರಸ್ತೆಯಲ್ಲಿ ಬಾಡಿಗೆ ಮನೆಯಲ್ಲಿ ವಾಸವಿದ್ದ. ಬೆಳಗ್ಗೆ ಮನೆಯಲ್ಲಿ ಯಾರು ಇಲ್ಲದ ವೇಳೆ ಶಾಲಾ ಸಮವಸ್ತ್ರದಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಪಾರಿವಾಳದ ಬೆಟ್ಟಿಂಗ್ ವಿಚಾರಕ್ಕೆ ಸ್ನೇಹಿತರ ಜೊತೆ ಗಲಾಟೆ ಮಾಡಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎನ್ನಲಾಗಿದೆ. ಡೆತ್ ನೋಟ್ ಇದೆ ಎನ್ನಲಾಗಿದ್ದು ಬಹಿರಂಗಗೊಂಡಿಲ್ಲ.

ಈ ಸಂಬಂಧ ಜಯನಗರ ಪೊಲೀಸರು (Police) ಪ್ರಕರಣ ದಾಖಲಿಸಿಕೊಂಡಿದ್ದಾರೆ.

Share This Article