ಯುಗಾದಿ ಹಬ್ಬಕ್ಕೆ ಸೀರೆ ಹಂಚಲು ಬಂದ ಬಿಜೆಪಿ ಕಾರ್ಯಕರ್ತರು- ಬೆಂಕಿ ಹಚ್ಚಿ ಮತದಾರರಿಂದ ಕ್ಲಾಸ್

Public TV
1 Min Read

ಚಿಕ್ಕಮಗಳೂರು: ಚುನಾವಣೆ ನೆಪದಲ್ಲಿ ಮುಂಬರುವ ಯುಗಾದಿ ಹಬ್ಬಕ್ಕೆ ಸೀರೆ ಹಂಚಿಕೆ ಮಾಡಿದ್ದ ಶಾಸಕ ಸಿಟಿ ರವಿ (CT Ravi) ಬೆಂಬಲಿಗರಿಗೆ ಮತದಾರರು ಮೈಚಳಿ ಬಿಡಿಸಿರುವ ಘಟನೆ ಚಿಕ್ಕಮಗಳೂರು (Chikkamagaluru) ತಾಲೂಕಿನಲ್ಲಿ ನಡೆದಿದೆ.

ಮಂಗಳವಾರ ರಾತ್ರಿ ಬಿಜೆಪಿ ಕಾರ್ಯಕರ್ತರು ಚಿಕ್ಕಮಗಳೂರು ತಾಲೂಕಿನ ಭಕ್ತರಹಳ್ಳಿ, ಮಲ್ಲೇನಹಳ್ಳಿ ಭಾಗದಲ್ಲಿ ಸೀರೆ ಹಂಚಿದ್ದಾರೆ. ಸೀರೆ ಹಂಚುವ ವೇಳೆ ಮನೆಗೆ ಬಂದ ಮದ್ಯವ್ಯಸನಿಯೊಬ್ಬ ಸೀರೆಗೆ ಬೆಂಕಿ ಹಚ್ಚಿ ಆಕ್ರೋಶ ಹೊರಹಾಕಿದ್ದಾನೆ. ರಸ್ತೆ ಮಧ್ಯೆ ಸೀರೆಯನ್ನು ಸುಟ್ಟು ಸೀರೆ ಹಂಚಲು ಬಂದಿದ್ದ ಬಿಜೆಪಿ ಕಾರ್ಯಕರ್ತರಿಗೆ ಅಲ್ಲೇ ಕ್ಲಾಸ್ ತೆಗೆದುಕೊಂಡಿದ್ದಾನೆ. ಇದನ್ನೂ ಓದಿ: ಪ್ರೀತಂ ಗೌಡರಿಂದ ಭರಪೂರ ಕೊಡುಗೆ – ಬಾಗಿನ ಹೆಸರಲ್ಲಿ ಸೀರೆ, ಬೆಳ್ಳಿಯ ದೇವರ ಫೋಟೋ ಹಂಚಿಕೆ

ಕೊರೊನಾ ಸಂದರ್ಭದಲ್ಲಿ ಒಂದು ಕೆಜಿ ಅಕ್ಕಿ ಕೊಟ್ಟಿಲ್ಲ. ಈಗ ಎಲೆಕ್ಷನ್ ಬಂತು ಅಂತ ಸೀರೆ ಹಂಚಲು ಬಂದಿದ್ದಾರಾ ಎಂದು ಹಳ್ಳಿಗರು ರೆಬೆಲ್ ಆಗಿದ್ದಾರೆ. ನಮಗೆ ಸೀರೆ ಬೇಡ, ನಮ್ಮ ಮಕ್ಕಳ ಉತ್ತಮ ಭವಿಷ್ಯಕ್ಕಾಗಿ ನಮಗೆ ಸೂಕ್ತವಾದ ಮೂಲಭೂತ ಸೌಲಭ್ಯ ಬೇಕು ಎಂದು ಕ್ಲಾಸ್ ತೆಗೆದುಕೊಂಡಿದ್ದಾರೆ.

ವ್ಯಕ್ತಿ 2-3 ಸೀರೆಗಳನ್ನು ರಸ್ತೆಗೆ ಎಸೆದು ಬೆಂಕಿ ಹಚ್ಚಿದ್ದಾನೆ. ಇದನ್ನು ಕಂಡ ಬಿಜೆಪಿ ಕಾರ್ಯಕರ್ತರು ಸ್ಥಳದಿಂದ ಕಾಲ್ಕಿತ್ತಿದ್ದಾರೆ. ಇದನ್ನೂ ಓದಿ: EXCLUSIVE: ದೇವರ ದುಡ್ಡನ್ನೂ ಬಿಡದ ನಾಯಕರು- ಮುಜರಾಯಿ ಹಣದ ಮೇಲೆ ಬಿಜೆಪಿ ಶಾಸಕನ ಕಣ್ಣು

Share This Article
Leave a Comment

Leave a Reply

Your email address will not be published. Required fields are marked *