56 ಇಂಚು ಎದೆಯ ಮೋದಿ ಈ ದೇಶದಲ್ಲಿ ರಣಹೇಡಿ ಎಂದು ತೋರಿಸಿಕೊಳ್ತಿದ್ದಾರೆ: ಬಿ.ಕೆ ಹರಿಪ್ರಸಾದ್

Public TV
2 Min Read

ಮಂಗಳೂರು: 56 ಇಂಚು ಎದೆಯ ನರೇಂದ್ರ ಮೋದಿ (Narendra Modi) ಈ ದೇಶದಲ್ಲಿ ರಣಹೇಡಿ ಎಂದು ತೋರಿಸಿಕೊಳ್ಳುತ್ತಿದ್ದಾರೆ. ರಾಹುಲ್ ಗಾಂಧಿ (Rahul Gandhi) ಮೇಲೆ ತೆಗೆದುಕೊಂಡ ಕ್ರಮವನ್ನು ಕಾನೂನು, ರಾಜಕೀಯವಾಗಿ ಹೋರಾಟ ಮಾಡುತ್ತೇವೆ. ಕೋರ್ಟ್ ನಲ್ಲಿ ನ್ಯಾಯದೇವತೆ ಕಣ್ಣಿಗೆ ಕಟ್ಟಿಕೊಂಡಿರುವ ಕಪ್ಪುಪಟ್ಟಿ ಬಿಚ್ಚಿಕೊಂಡಿದೆ. ಈ ಬೆಳವಣಿಗೆ ತಾಪತ್ರಯ ಆಗುತ್ತಿದೆ ಎಂದು ಪರಿಷತ್ ವಿಪಕ್ಷ ನಾಯಕ ಬಿ.ಕೆ ಹರಿಪ್ರಸಾದ್ (B.K Hariprasad) ವಾಗ್ದಾಳಿ ನಡೆಸಿದರು.

ಸಂಸದ ಸ್ಥಾನದಿಂದ ರಾಹುಲ್ ಗಾಂಧಿ ಅನರ್ಹಗೊಳಿಸಿರುವ ವಿಚಾರ ಸಂಬಂಧ ಮಂಗಳೂರಿನಲ್ಲಿ ಪತ್ರಿಕಾಗೋಷ್ಠಿ ನಡೆಸಿ ಅವರು ಮಾತನಾಡಿದರು. ಕಳ್ಳರನ್ನು ಕಳ್ಳ ಎಂದು ಹೇಳುವುದು ತಪ್ಪು ಎಂಬ ಭಾವನೆ ಬಿಜೆಪಿ (BJP) ಯಲ್ಲಿದೆ ಎಂದು ಕಿಡಿಕಾರಿದರು. ಪ್ರಜಾಪ್ರಭುತ್ವದ ಎಲ್ಲಾ ನೀತಿ ಸಂಹಿತೆಗಳನ್ನು ಗಾಳಿಗೆ ತೂರಲಾಗಿದೆ. ರಾಹುಲ್ ಗಾಂಧಿಯವರ ಬಗ್ಗೆ ನರೇಂದ್ರ ಮೋದಿಗೆ ಎಷ್ಟು ಭಯ ಇದೆ ಎಂದು ಗೊತ್ತಾಗುತ್ತೆ. ರಾಹುಲ್ ಗಾಂಧಿ ಅನರ್ಹಗೊಳಿಸಿದ ಪ್ರಕ್ರಿಯೆ ಪ್ರಶ್ನಾರ್ಹ. ನರಮೇಧ, ಕೈ, ಕಾಲು ಕತ್ತರಿಸಬೇಕು ಎಂದು ಹೇಳುವವರನ್ನು ಪಾಕಿಸ್ತಾನ (Pakistan) ಕ್ಕೆ ಓಡಿಸುತ್ತೇವೆ ಎಂದವರ ವಿರುದ್ಧ ಯಾವುದೇ ಕ್ರಮ ಆಗಿಲ್ಲ. ನರಮೇಧದ ಭಾಷಣ ಮಾಡುವವರು ಇನ್ನು ಸಹ ಆರಾಮವಾಗಿ ತಿರುಗಾಡುತ್ತಿದ್ದಾರೆ ಎಂದು ಗರಂ ಆದರು.

ಬಿಜೆಪಿಗೊಂದು ಕಾನೂನು ಬೇರೆಯವರಿಗೊಂದು ಕಾನೂನೆಂದು ಆಗುತ್ತಿದೆ. ದ್ವೇಷ ಭಾಷಣ ಮಾಡಿದವರು, ಸಂಘರ್ಷಕ್ಕೆ ಕರೆ ಕೊಟ್ಟವರು, ಶಾಂತಿ ಸೌಹಾರ್ದತೆ ಕೆಡಿಸಿದವರ ಮೇಲೆ ಕ್ರಮ ಆಗಿಲ್ಲ ಎಂದರು. ಇದನ್ನೂ ಓದಿ: ಜೈಲಿಗೆ ಹೋಗಿಬಂದ ಯಡಿಯೂರಪ್ಪ ಮನೆಗೆ ಅಮಿತ್ ಶಾ ತಿಂಡಿಗೆ ಹೋಗಿಲ್ವಾ? – ಹೆಚ್. ವಿಶ್ವನಾಥ್ ಪ್ರಶ್ನೆ

ಮುಸ್ಲಿಮರ ಮೀಸಲಾತಿಗೆ ಕತ್ತರಿ ವಿಚಾರದ ಕುರಿತು ಪ್ರತಿಕ್ರಿಯಿಸಿ, ಸಂಪೂರ್ಣ ಮೀಸಲಾತಿ ರದ್ದುಗೊಳಿಸುವ ಹುನ್ನಾರವಿದು. 2015ರಲ್ಲಿ ಬಿಹಾರದಲ್ಲಿ ಮೋಹನ್ ಭಾಗವತ್ ನಾವು ಅಧಿಕಾರಕ್ಕೆ ಬಂದ್ರೆ ಮೀಸಲಾತಿ ತೆಗಿತೇವೆ ಅಂದ್ರು. ಈ ಸಂವಿಧಾನದಲ್ಲಿ ಸರ್ಕಾರ ನಡೆಸಲು ಆಗಲ್ಲ ಎಂದು ಜೋಷಿಯವರು ಹೇಳಿದ್ದಾರೆ. ಬಿಜೆಪಿಯ ಸೂತ್ರಧಾರಿಗಳ ಹೇಳಿಕೆಯಂತೆ ಪಾತ್ರಧಾರಿಗಳು ಮಾಡುತ್ತಿದ್ದಾರೆ. ಸಂಪೂರ್ಣವಾಗಿ ಮೀಸಲಾತಿ ವಿರೋಧಿ ನೀತಿಯಿದು. ಇದು ಕೇವಲ ಮೊಸಳೆ ಕಣ್ಣೀರು ಹಾಕುವಂತದ್ದು. ಮೊದಲು ಮೂಗಿಗೆ ತುಪ್ಪ ಹಚ್ಚುತ್ತಿದ್ದರು. ಈಗ ತಲೆ ಮೇಲೆ ತುಪ್ಪ ಹಚ್ಚುತ್ತಿದ್ದಾರೆ. ಮೂಗಿಗೆ ತುಪ್ಪ ಹಚ್ಚಿದ್ರೆ ವಾಸನೆಯಾದರು ಬರುತ್ತಿತ್ತು. ತಲೆ ಚೆನ್ನಾಗಿ ಬಾಚಿಕೊಳ್ಳಿಯೆಂದು ತಲೆಗೆ ತುಪ್ಪ ಹಚ್ಚಿದ್ದಾರೆ ಎಂದು ಲೇವಡಿ ಮಾಡಿದರು.

Share This Article
Leave a Comment

Leave a Reply

Your email address will not be published. Required fields are marked *