ಸಹಾಯ ಮಾಡೋ ನೆಪದಲ್ಲಿ ಅಂಧ ದಂಪತಿಯ ಮಗುವನ್ನು ಕಿಡ್ನಾಪ್‍ಗೈದ ಮಹಿಳೆ

Public TV
1 Min Read

ಬೆಂಗಳೂರು: ಮಗುವಿಗೆ ನೀರು ಕುಡಿಸಲು ಸಹಾಯ ಮಾಡುವಂತೆ ಅಂಧ ದಂಪತಿಯ ಸಹಾಯಕ್ಕೆ ಬಂದ ಮಹಿಳೆ ಮಗುವಿನೊಂದಿಗೆ ಪರಾರಿಯಾಗಿರುವ ಘಟನೆ ಮೆಜೆಸ್ಟಿಕ್ ಬಿಎಂಟಿಸಿ ಬಸ್ ನಿಲ್ದಾಣದಲ್ಲಿ ನಡೆದಿದೆ.

ರಾಯಚೂರು ಮೂಲದ ಅಂಧ ದಂಪತಿಯಾದ ಚಿನ್ನು ಮತ್ತು ಬಸವರಾಜು ಅವರ ಮಗುವನ್ನು ಅಪಹರಣ ಮಾಡಿದ್ದು, ಶನಿವಾರ ಬೆಳಗ್ಗೆ 7:30ರ ಸಮಯದಲ್ಲಿ ಘಟನೆ ನಡೆದಿದೆ.

ಬಸ್ ನಿಲ್ದಾಣಕ್ಕೆ ಆಗಮಿಸಿದ್ದ ದಂಪತಿ ತಮ್ಮ 8 ತಿಂಗಳ ಮಗುವಿಗೆ ನೀರು ಕುಡಿಸಲು ಮುಂದಾಗಿದ್ದರು. ಈ ಸಂದರ್ಭದಲ್ಲಿ ಅನಾಮಿಕ ಮಹಿಳೆ ಸಹಾಯ ನೆಪದಲ್ಲಿ ಧಾವಿಸಿದ್ದು, ಮಗುವಿನೊಂದಿಗೆ ಎಸ್ಕೇಪ್ ಆಗಿದ್ದಾಳೆ. ಘಟನೆ ಬಗ್ಗೆ ಉಪ್ಪಾರಪೇಟೆ ಪೊಲೀಸ್ ಠಾಣೆಯಲ್ಲಿ ಅಪಹರಣ ಪ್ರಕರಣ ದಾಖಲಾಗಿದ್ದು, ಮಗುವಿನ ಪತ್ತೆಗಾಗಿ ಪೊಲೀಸರು ಶೋಧ ಕಾರ್ಯ ನಡೆಸಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *