ಹೈಕೋರ್ಟ್ ಮೆಟ್ಟಿಲೇರಿದ ಬಿಗ್ ಬಿ ಮೊಮ್ಮಗಳು- ಅಷ್ಟಕ್ಕೂ ಆಗಿದ್ದೇನು?

Public TV
1 Min Read

ಬಾಲಿವುಡ್ (Bollywood) ಅಂಗಳದ ಹಿರಿಯ ನಟ ಅಮಿತಾಭ್ ಬಚ್ಚನ್ (Amitabh Bachchan) ಮೊಮ್ಮಗಳು ಹೈಕೋರ್ಟ್ ಮೆಟ್ಟಿಲೇರಿದ್ದಾಳೆ. ತನ್ನ ಬಗ್ಗೆ ಸುಳ್ಳು ಸುದ್ದಿ ಹಬ್ಬಿಸಿದ ವಿಚಾರಕ್ಕೆ ನೊಂದು ಆರಾಧ್ಯ ಕೋರ್ಟ್ ಮೆಟ್ಟಿಲೇರುವ ಘಟನೆ ಇದೀಗ ಬೆಳಕಿಗೆ ಬಂದಿದೆ.

ನಟ ಅಭಿಷೇಕ್- ಐಶ್ವರ್ಯ ರೈ ಪುತ್ರಿ ಆರಾಧ್ಯಗೆ (Aradhya) ಈಗಿನ್ನೂ 11 ವರ್ಷ. ಬಚ್ಚನ್ ಕುಟುಂಬದ ಕುಡಿ ಎನ್ನುವ ಕಾರಣಕ್ಕೆ ಹೆಚ್ಚು ಹೈಲೈಟ್ ಆಗುತ್ತಿದ್ದಾರೆ. ಆರಾಧ್ಯ ಹೆಸರಲ್ಲಿ ಅನೇಕ ಫ್ಯಾನ್‌ಪೇಜ್‌ಗಳು ಸಿದ್ಧಗೊಂಡಿವೆ. ಇದರ ಜೊತೆ ಕೆಲವು ಯೂಟ್ಯೂಬ್ ಚಾನೆಲ್‌ಗಳು ವೀವ್ಸ್ ಗಿಟ್ಟಿಸಿಕೊಳ್ಳಲು ಆರಾಧ್ಯ ಆರೋಗ್ಯದ ಬಗ್ಗೆ ಸುಳ್ಳು ಸುದ್ದಿ ಪ್ರಸಾರ ಮಾಡಿದ್ದವು. ಅವುಗಳ ವಿರುದ್ಧ ಆರಾಧ್ಯ ಈಗ ಕ್ರಮಕ್ಕೆ ಮುಂದಾಗಿದ್ದಾರೆ. ಇದನ್ನೂ ಓದಿ:ದಾದಾ ಸಾಹೇಬ್ ಫಾಲ್ಕೆ ಚಿತ್ರೋತ್ಸವದಲ್ಲಿ ‘ಬ್ರಹ್ಮಕಮಲ’ ಚಿತ್ರ

ದೆಹಲಿ ಹೈಕೋರ್ಟ್‌ನಲ್ಲಿ ತಮ್ಮ ಬಗ್ಗೆ ಈ ರೀತಿ ಸುದ್ದಿ ಪ್ರಕಟ ಆಗದಂತೆ ತಡೆ ನೀಡಬೇಕು ಎಂದು ಆರಾಧ್ಯ ಮನವಿ ಮಾಡಿದ್ದಾಳೆ. ಈ ಪ್ರಕರಣದ ವಿಚಾರಣೆ ಇಂದು (ಏಪ್ರಿಲ್ 20) ನಡೆಯಲಿದೆ. ಸೆಲೆಬ್ರಿಟಿಗಳ ಬಗ್ಗೆ ಅನೇಕ ವದಂತಿಗಳ ಬಗ್ಗೆ ಸುದ್ದಿಯಾಗುತ್ತಲೇ ಇರುತ್ತದೆ. ಆದರೆ, ಅವರ ಮಕ್ಕಳ ಬಗ್ಗೆ ಈ ರೀತಿ ಸುಳ್ಳು ಸುದ್ದಿ ಹುಟ್ಟಿಕೊಂಡಾಗ ಅದನ್ನು ಒಪ್ಪಿಕೊಳ್ಳೋಕೆ ಬಚ್ಚನ್ ಕುಟುಂಬಕ್ಕೆ ಹಾಗೂ ಆರಾಧ್ಯಗೆ ಸಾಧ್ಯವಾಗಿಲ್ಲ. ಇಲ್ಲಸಲ್ಲದ ಸುಳ್ಳು ಸುದ್ದಿ ಬಿತ್ತರಿಸುವ ಖಾಸಗಿ ಯೂಟ್ಯೂಬರ್‌ಗಳಿಗೆ ಇದು ಎಚ್ಚರಿಕೆಯ ಗಂಟೆಯಾಗಿದೆ. ಇದರಿಂದ ನೊಂದು ಆರಾಧ್ಯ ಕೋರ್ಟ್ ಮೆಟ್ಟಿಲೇರಿದ್ದಾಳೆ.

Share This Article