ಜುಲೈ 4ಕ್ಕೆ ಕೋರ್ಟಿಗೆ ಹಾಜರಾಗಲಿದ್ದಾರೆ ಬಾಲಿವುಡ್ ನಟಿ ಕಂಗನಾ ರಣಾವತ್

Public TV
1 Min Read

ಬಾಲಿವುಡ್ ನಟಿ ಕಂಗನಾ ರಣಾವತ್ ಅವರಿಗೆ ಮೇಲೆಂದ ಮೇಲೆ ಕಷ್ಟಗಳು ಎದುರಾಗುತ್ತಿವೆ. ಮೊನ್ನೆಯಷ್ಟೇ ಇವರ ನಟನೆಯ ಧಾಕಡ್ ಸಿನಿಮಾ ಬಾಕ್ಸ್ ಆಫೀಸಿನಲ್ಲಿ ಮಕಾಡೆ ಮಲಗಿದೆ. ಅಲ್ಲದೇ, ಅವರು ಆಡುವ ಮಾತುಗಳಿಂದಾಗಿ ಅನೇಕರು ಇವರ ಸಿನಿಮಾಗಳಿಂದ ಹಿಂದೆ ಸರಿಯುವುದಾಗಿ ಮಾತನಾಡಿದ್ದಾರೆ. ಅದರ ಬೆನ್ನಲ್ಲೇ ಮುಂಬೈ ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ ಕೋರ್ಟ್ ಹಾಜರಾಗುವಂತೆ ಕಂಗನಾ ರಣಾವತ್ ಅವರಿಗೆ ನೋಟಿಸ್ ಜಾರಿ ಮಾಡಿದೆ.

ಬಾಲಿವುಡ್ ನ ಖ್ಯಾತ ಗೀತ ರಚನೆಕಾರ ಜಾವೇದ್ ಅಖ್ತರ್ ಸಲ್ಲಿಸಿರುವ ಮಾನನಷ್ಟ ಮೊಕದ್ದಮೆಗೆ ಸಂಬಂಧಿಸಿದಂತೆ ಸೋಮವಾರ ವಿಚಾರಣೆ ನಡೆಸಿದ ಅಂದೇರಿ ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ ಕೋರ್ಟ್, ಜುಲೈ 4 ರಂದು ರಣಾವತ್ ಖುದ್ದಾಗಿ ಹಾಜರಾಗುವಂತೆ ಸೂಚಿಸಿತು. ಇದಕ್ಕೂ ಮೊದಲು ಸೋಮವಾರ ಕಂಗನಾ ಹಾಜರಾತಿ ವಿನಾಯತಿಯನ್ನು ಬಯಸಿ, ಇವರ ಪರ ವಕೀಲರು ಕೋರ್ಟಿಗೆ ಮನವಿ ಮಾಡಿಕೊಂಡರು. ಇದನ್ನೂ ಓದಿ:ಪಿಂಕ್ ಕಲರ್ ಸೀರೆಯಲ್ಲಿ ಹಾಟ್ ಆಗಿ ಕಾಣಿಸಿಕೊಂಡ ರಶ್ಮಿಕಾ ಮಂದಣ್ಣ

ಗೀತರಚನೆಕಾರ ಜಾವೇದ್ ಅಖ್ತರ್ ಅವರಿಗೆ ಟಿವಿ ಸಂದರ್ಶನವೊಂದರಲ್ಲಿ ಅವರ ವರ್ಚಸ್ಸಿಗೆ ಧಕ್ಕೆ ತರುವಂತಹ ಮಾತುಗಳನ್ನು ಕಂಗನಾ ರಣಾವತ್ ಆಡಿದ್ದಾರೆ ಎಂದು ಆರೋಪಿಸಿ, ಅಖ್ತರ್ ಅವರು ಮಾನನಷ್ಟ ಮೊಕದ್ದಮೆ ದಾಖಲಿಸಿದ್ದಾರೆ. ಕಳೆದ ವರ್ಷ ನವೆಂಬರ್ ತಿಂಗಳಿಂದಲೇ ಈ ಕೇಸು ನಡೆಯುತ್ತಿದೆ.

Live Tv

Share This Article
Leave a Comment

Leave a Reply

Your email address will not be published. Required fields are marked *