ಛತ್ತೀಸ್‌ಗಢದ ದಾಂತೇವಾಡದಲ್ಲಿ ಬಾಂಬ್ ಬ್ಲಾಸ್ಟ್ – ಇಬ್ಬರು ಅರೆಸೇನಾಪಡೆ ಯೋಧರಿಗೆ ಗಾಯ

By
1 Min Read

ರಾಯ್ಪುರ: ಛತ್ತೀಸ್‌ಗಢದ ದಾಂತೇವಾಡ ಜಿಲ್ಲೆಯಲ್ಲಿ ಶನಿವಾರ ನಕ್ಸಲರು ಹುದುಗಿಸಿಟ್ಟಿದ್ದ ಸುಧಾರಿತ ಸ್ಫೋಟಕ ಸಾಧನ (IED) ಸ್ಫೋಟಗೊಂಡ ಪರಿಣಾಮ ಇಬ್ಬರು ಕೇಂದ್ರೀಯ ಮೀಸಲು ಪೊಲೀಸ್ ಪಡೆ (CRPF) ಸಿಬ್ಬಂದಿ ಮತ್ತು ಒಬ್ಬ ಪತ್ರಕರ್ತ ಗಾಯಗೊಂಡಿದ್ದಾರೆ.

- Advertisement -

ಪೀಪಲ್ಸ್ ಲಿಬರೇಶನ್ ಗೆರಿಲ್ಲಾ ಆರ್ಮಿ (PLGA) ಸಪ್ತಾಹದ ನಡುವೆ ಜಿಲ್ಲೆಯ ಬಲಸೂರ್ ಪಲ್ಲಿ ಮಾರ್ಗ್ ಪ್ರದೇಶದಲ್ಲಿ ನಕ್ಸಲರು ಹಾಕಿದ್ದ ಪೋಸ್ಟರ್‌ಗಳನ್ನು ಭದ್ರತಾ ಸಿಬ್ಬಂದಿ ತೆಗೆದುಹಾಕುತ್ತಿದ್ದಾಗ ಈ ಘಟನೆ ಸಂಭವಿಸಿದೆ. ಇದನ್ನೂ ಓದಿ: ತಿಂಗಳಿಗೆ 70 ಮಕ್ಕಳನ್ನು ಅಬಾರ್ಷನ್ ಮಾಡುತ್ತಿದ್ದೆ: ಭ್ರೂಣ ಹತ್ಯೆ ಕುರಿತು ನರ್ಸ್ ಮಂಜುಳ ಸ್ಫೋಟಕ ಮಾಹಿತಿ

- Advertisement -

- Advertisement -

ಕಳೆದ ವರ್ಷ ಹಲವಾರು ಕಾರಣಗಳಿಂದ ಪ್ರಾಣ ಕಳೆದುಕೊಂಡ 54 ನಕ್ಸಲರ (Naxalites) ಸ್ಮರಣಾರ್ಥ ಭಯೋತ್ಪಾದಕರು ಪಿಎಲ್‌ಜಿಎ ಸಪ್ತಾಹವನ್ನು ಆಚರಿಸುತ್ತಿದ್ದಾರೆ. ಘಟನೆಯ ನಂತರ ಗಾಯಗೊಂಡ ಸಿಬ್ಬಂದಿಯನ್ನು ವೈದ್ಯಕೀಯ ಚಿಕಿತ್ಸೆಗಾಗಿ ಹತ್ತಿರದ ಆಸ್ಪತ್ರೆಗೆ ಸಾಗಿಸಲಾಗಿದ್ದು, ಸದ್ಯ ಅಪಾಯದಿಂದ ಪಾರಾಗಿದ್ದಾರೆ. ಇದನ್ನೂ ಓದಿ: 900 ಭ್ರೂಣಗಳ ಹತ್ಯೆ ಆರೋಪಕ್ಕೆ ಅಂಜಿ ವಿಷದ ಚುಚ್ಚುಮದ್ದು ತೆಗೆದುಕೊಂಡು ಆತ್ಮಹತ್ಯೆ ಮಾಡಿಕೊಂಡ್ರಾ ವೈದ್ಯ?

- Advertisement -

ಇದಕ್ಕೂ ಮುನ್ನ, ಛತ್ತೀಸ್‌ಗಢದಲ್ಲಿ ಎರಡನೇ ಹಂತದ ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿ, ರಾಜ್ಯದ ಬಿಂದ್ರನವಗಢ ಪ್ರದೇಶದಲ್ಲಿ ಮತಗಟ್ಟೆಯನ್ನು ಗುರಿಯಾಗಿಸಿಕೊಂಡು ನಕ್ಸಲರು ಸುಧಾರಿತ ಸ್ಫೋಟಕ ಸಾಧನವನ್ನು ಸ್ಫೋಟಿಸಿದ ಪರಿಣಾಮ ಒಬ್ಬ ಇಂಡೋ-ಟಿಬೆಟಿಯನ್ ಬಾರ್ಡರ್ ಪೊಲೀಸ್ (ITBP) ಯೋಧ ಸಾವನ್ನಪ್ಪಿದ್ದರು. ಇದನ್ನೂ ಓದಿ: ಶಿಕ್ಷಕನ ಅಪಹರಿಸಿ, ಬಂದೂಕಿನಿಂದ ಬೆದರಿಸಿ ಮಗಳೊಂದಿಗೆ ಮದುವೆ ಮಾಡಿಸಿದ ಕಿಡ್ನ್ಯಾಪರ್

ಮತದಾನಕ್ಕೆ ಒಂದು ದಿನ ಮೊದಲು ಛತ್ತೀಸ್‌ಗಢದ ಧಮ್ತಾರಿ ಪ್ರದೇಶದಲ್ಲಿ ಎರಡು ಕಡಿಮೆ ತೀವ್ರತೆಯ ಐಇಡಿ ಸ್ಫೋಟಕಗಳನ್ನು ಸ್ಫೋಟಿಸಿದ್ದರು. ಇದರಿಂದ ಯಾವುದೇ ಪ್ರಾಣಹಾನಿ ಸಂಭವಿಸಿರಲಿಲ್ಲ. ಅಧಿಕಾರಿಗಳು ಘಟನಾ ಪ್ರದೇಶದಿಂದ 5 ಕೆಜಿ ಸುಧಾರಿತ ಸ್ಫೋಟಕ ಸಾಧನವನ್ನು ವಶಪಡಿಸಿಕೊಂಡಿದ್ದರು. ಇದನ್ನೂ ಓದಿ: ರೆಸ್ಟೋರೆಂಟಲ್ಲಿ ಕೈ ತೊಳೆದು ಬರುವಷ್ಟರಲ್ಲಿ ಪಿಎಸ್‌ಐ ಪಿಸ್ತೂಲ್ ಮಂಗಮಾಯ!

Share This Article