ಉಪರಾಷ್ಟ್ರಪತಿ ಸಿಪಿ ರಾಧಾಕೃಷ್ಣನ್ ನಿವಾಸಕ್ಕೆ ಬಾಂಬ್ ಬೆದರಿಕೆ

Public TV
1 Min Read

ಚೆನ್ನೈ: ನಗರದಲ್ಲಿರುವ ಉಪರಾಷ್ಟ್ರಪತಿ ಸಿ.ಪಿ. ರಾಧಾಕೃಷ್ಣನ್ (CP Radhakrishnan) ಅವರ ಪೋಯಸ್ ಗಾರ್ಡನ್ ನಿವಾಸಕ್ಕೆ ಬಾಂಬ್ ಬೆದರಿಕೆ (Bomb threat) ಕರೆ ಬಂದಿದೆ. ತಪಾಸಣೆ ಬಳಿಕ ಇದೊಂದು ಹುಸಿ ಬೆದರಿಕೆ ಎಂಬುದಾಗಿ ಪೊಲೀಸರು ಸ್ಪಷ್ಟಪಡಿಸಿದ್ದಾರೆ.

ಸಹಾಯಕ ಪೊಲೀಸ್ ಆಯುಕ್ತರ ಕಚೇರಿಗೆ ಇಮೇಲ್ ಬೆದರಿಕೆ ಸಂದೇಶ ಬಂದ ನಂತರ, ಬಾಂಬ್ ಪತ್ತೆ ಮತ್ತು ವಿಲೇವಾರಿ ದಳದ ತಜ್ಞರು ಮತ್ತು ಸ್ನಿಫರ್ ನಾಯಿಯನ್ನು ಒಳಗೊಂಡ ತಂಡವನ್ನು ಉಪರಾಷ್ಟ್ರಪತಿಯವರ (Vice President) ಮನೆಗೆ ಸಂಪೂರ್ಣ ಶೋಧ ನಡೆಸಲು ಕಳುಹಿಸಲಾಯಿತು.

ಶೋಧ ವೇಳೆ ಯಾವುದೇ ಅನುಮಾನಸ್ಪದ ವಸ್ತುಗಳು ಪತ್ತೆಯಾಗದ ಕಾರಣ ಇದೊಂದು ಹುಸಿ ಬಾಂಬ್ ಬೆದರಿಕೆ ಎಂದು ಪೊಲೀಸರು ನಿರ್ಧರಿಸಿದರು. ಕಳೆದ ಒಂದು ತಿಂಗಳಿನಿಂದ ಚೆನ್ನೈ ಪೊಲೀಸರಿಗೆ ಇದೇ ರೀತಿಯ ಹಲವಾರು ಇಮೇಲ್ ಬೆದರಿಕೆಗಳು ಬರುತ್ತಿದ್ದು, ಕಿಡಿಗೇಡಿಗಳನ್ನು ಪತ್ತೆಹಚ್ಚಲು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಪ್ರತ್ಯೇಕ ಪ್ರಕರಣದಲ್ಲಿ ದೆಹಲಿಯ ಪಶ್ಚಿಮ ವಿಹಾರ್ ಪ್ರದೇಶದ ವಿಶಾಲ್ ಭಾರ್ತಿ ಪಬ್ಲಿಕ್ ಶಾಲೆಗೆ ಗುರುವಾರ ಬಂದ ಬಾಂಬ್ ಬೆದರಿಕೆ ಇಮೇಲ್ ಆತಂಕ ಮತ್ತು ತುರ್ತು ಪ್ರತಿಕ್ರಿಯೆಗೆ ಕಾರಣವಾಯಿತು. ನಂತರ ಅದನ್ನು ಹುಸಿ ಬೆದರಿಕೆ ಎಂದು ಗುರುತಿಸಲಾಯಿತು. ಸಂದೇಶ ಕಳುಹಿಸುವವರು ಪರೀಕ್ಷೆಗಳನ್ನು ತಪ್ಪಿಸಲು ಬಯಸಿದ್ದ ವಿದ್ಯಾರ್ಥಿ ಎಂದು ಪೊಲೀಸರು ಬಹಿರಂಗಪಡಿಸಿದ್ದಾರೆ.

Share This Article