Madikeri | ಜೀವನದಲ್ಲಿ ಜಿಗುಪ್ಸೆ – ಗುಂಡು ಹಾರಿಸಿಕೊಂಡು ವ್ಯಕ್ತಿ ಆತ್ಮಹತ್ಯೆ

Public TV
1 Min Read

ಮಡಿಕೇರಿ: ಜೀವನದಲ್ಲಿ ಜಿಗುಪ್ಸೆಗೊಂಡು ಗುಂಡು ಹಾರಿಸಿಕೊಂಡು ವ್ಯಕ್ತಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಕೊಡಗು (Kodagu) ಜಿಲ್ಲೆಯ ಸೋಮವಾರಪೇಟೆ (Somwarpet) ತಾಲೂಕಿನ ಐಗೂರು ಗ್ರಾಮಪಂಚಾಯಿತಿ ವ್ಯಾಪ್ತಿಯ ಯಡವಾರೆ ಗ್ರಾಮದಲ್ಲಿ ನಡೆದಿದೆ.

ನಾರೂರು ಮನೆ ಮಧು (ಅಶೋಕ್) ಮೃತ ವ್ಯಕ್ತಿ. ಮನೆಯಲ್ಲಿ ಯಾರೂ ಇಲ್ಲದ ಸಂದರ್ಭ ಮದ್ಯ ಸೇವಿಸಿ ತಲೆಭಾಗಕ್ಕೆ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಮೂರು ವರ್ಷದ ಪುತ್ರಿಗೆ ಅನಾರೋಗ್ಯದ ಹಿನ್ನೆಲೆಯಲ್ಲಿ ಒಂದು ವಾರದ ಹಿಂದೆ ಪತ್ನಿ ಮತ್ತು ಪುತ್ರಿ ಬೆಂಗಳೂರಿಗೆ ತೆರಳಿದ್ದರು. ಭಾನುವಾರ ಬೆಳಗ್ಗೆ ಮೃತನ ತಾಯಿ ಕೂಡ ಬೆಂಗಳೂರಿಗೆ ತೆರಳಿದ್ದರು. ಈ ಸಂದರ್ಭ ತನ್ನ ಮನೆಯಲ್ಲಿ ಇದ್ದ ಡಬ್ಬಲ್ ಬ್ಯಾರೆಲ್ ಕೋವಿಯಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಇದನ್ನೂ ಓದಿ: ಪಾಕಿಸ್ತಾನದ ಪರ ಬೇಹುಗಾರಿಕೆ – ಉತ್ತರ ಪ್ರದೇಶದ ಉದ್ಯಮಿ ಬಂಧನ

ಘಟನೆಗೆ ಸಂಬಂಧಿಸಿದಂತೆ ಸೋಮವಾರಪೇಟೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ. ಇದನ್ನೂ ಓದಿ: ಮಹಿಳೆ ಕೊಲೆ ಮಾಡಿ ಬೈಕ್ ಅಪಘಾತವೆಂದು ಬಿಂಬಿಸಿದ ಪತಿ, ಮಾವ, ಅತ್ತೆ ಅರೆಸ್ಟ್

Share This Article