ಗುರು ಅಡ್ವಾಣಿಗೆ ಪಂಚ್ ನೀಡಿದ ಬಾಕ್ಸರ್ ಮೋದಿ: ರಾಹುಲ್ ಗಾಂಧಿ

Public TV
1 Min Read

ಚಂಡೀಗಢ: ಬಾಕ್ಸ್ ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ರಾಜಕೀಯ ಗುರು, ಬಿಜೆಪಿ ಹಿರಿಯ ಮುಖಂಡ ಎಲ್.ಕೆ.ಅಡ್ವಾಣಿ ಅವರಿಗೆ ಪಂಚ್ ಕೊಟ್ಟಿದ್ದಾರೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವ್ಯಂಗ್ಯವಾಡಿದ್ದಾರೆ.

ಖ್ಯಾತ ಬಾಕ್ಸರ್ ಅವರ ವಿಜೇಂದ್ರ ಸಿಂಗ್ ಸೇರಿದಂತೆ ಅನೇಕ ಬಾಕ್ಸರ್ ಗಳನ್ನು ಭಾರತಕ್ಕೆ ಹರ್ಯಾಣದ ಭಿವಾನಿ ಲೋಕಸಭಾ ಕ್ಷೇತ್ರ ನೀಡಿದೆ. ಇಲ್ಲಿ ಇಂದು ನಡೆದ ಕಾಂಗ್ರೆಸ್ ಸಮಾವೇಶದಲ್ಲಿ ರಾಹುಲ್ ಗಾಂಧಿ, ಬಾಕ್ಸಿಂಗ್, ಪಂಚ್, ರಿಂಗ್ ಪದಗಳ ಮೂಲಕ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದರು.

ಹರ್ಯಾಣದ ಭಿವಾನಿಯಲ್ಲಿ ನಡೆದ ಸಮಾವೇಶದಲ್ಲಿ ಮಾತನಾಡಿದ ಅವರು, ಪ್ರಧಾನಿ ಮೋದಿಯವರು ಭ್ರಷ್ಟಾಚಾರ ಹಾಗೂ ನಿರುದ್ಯೋಗ ಕಿತ್ತುಹಾಕುತ್ತೇವೆ ಎಂದು ಹೇಳಿ ಅಧಿಕಾರಕ್ಕೆ ಬಂದರು. ಅವರು ಬಾಕ್ಸಿಂಗ್ ರಿಂಗ್ ಪ್ರವೇಶಿಸುತ್ತಿದ್ದಂತೆ ಕೋಚ್ ಅಡ್ವಾಣಿ ಜಿ, ನಿತೀನ್ ಗಡ್ಕರಿ ಹಾಗೂ ತಂಡದ ಸದಸ್ಯರಿದ್ದರು. ಈ ಮೂಲಕ ಮೊದಲ ಪಂಚ್ ಮೂಲಕ ಕೋಚ್ ಅಡ್ವಾಣಿ ಅವರನ್ನು ರಿಂಗ್‍ನಿಂದ ಹೊರಹಾಕಿದ್ದಾರೆ ಎಂದು ಲೇವಡಿ ಮಾಡಿದರು.

ಪ್ರಧಾನಿ ನರೇಂದ್ರ ಮೋದಿ ಅವರು ಹಿರಿಯ ನಾಯಕರನ್ನು ಸೈಡ್‍ಲೈನ್ ಮಾಡುವ ಮೂಲಕ ಅವಮಾನ ಮಾಡಿದ್ದಾರೆ. ಬಾಕ್ಸರ್ ಮೋದಿ ಅವರು ಜಿಎಸ್‍ಟಿ ಮೂಲಕ ಸಣ್ಣ ವರ್ತಕರರನ್ನು ಚಚ್ಚಿದರು ಎಂದು ಹೇಳಿದರು.

ಎಲ್.ಕೆ.ಅಡ್ವಾಣಿ ಅವರಿಗೆ ಬಿಜೆಪಿ ಹೈಕಮಾಂಡ್ ಟಿಕೆಟ್ ಕೈತಪ್ಪಿಸಿದ್ದಕ್ಕೆ ರಾಹುಲ್ ಗಾಂಧಿ ಅವರು ಈ ಹಿಂದೆಯೂ ವಾಗ್ದಾಳಿ ನಡೆಸಿದ್ದರು. ಹರ್ಯಾಣದ ಭಿವಾನಿ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ಮಾಜಿ ಸಂಸದೆ ಶ್ರುತಿ ಚೌಧರಿ ಕಣಕ್ಕೆ ಇಳಿದಿದ್ದಾರೆ. ಇತ್ತ ಬಿಜೆಪಿಯಿಂದ ಹಾಲಿ ಸಂಸದ ಧರಂವೀರ್ ಸ್ಪರ್ಧಿಸುತ್ತಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *